ಬ್ರೇಕಿಂಗ್ ನ್ಯೂಸ್
31-12-20 11:21 am Mangalore Correspondent ಕರಾವಳಿ
ಮಂಗಳೂರು, ಡಿ. 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸಂಖ್ಯೆಯಲ್ಲಿ ಗೆದ್ದುಕೊಂಡಿದ್ದಾರೆ. ಬುಧವಾರ ರಾತ್ರಿ ವರೆಗೂ ಮತ ಎಣಿಕೆ ನಡೆದಿದ್ದು ಮಾಹಿತಿ ಪ್ರಕಾರ 1810 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದುಕೊಂಡರೆ, 982 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಎಸ್ ಡಿಪಿಐ 160 ಸ್ಥಾನಗಳನ್ನು ಮತ್ತು 40 ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತೆ ಬಿಜೆಪಿ ಬೆಂಬಲಿತರು ಪಾರಮ್ಯ ಕಂಡಿದ್ದಾರೆ. ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಕಡಬ ತಾಲೂಕಿನ ಬಹುತೇಕ ಭಾಗದಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಪಡೆದರೆ, ಮಂಗಳೂರು, ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಈ ಮೂಲಕ ನಗರ ಪ್ರದೇಶವಾದ ಈ ಮೂರು ತಾಲೂಕು ಭಾಗದಲ್ಲಿ ಹೆಚ್ಚಿನ ಕಡೆ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆಯುವ ಸೂಚನೆ ಲಭಿಸಿದೆ.
ಉಡುಪಿ ಜಿಲ್ಲೆಯಲ್ಲೂ ಬಿಜೆಪಿ ಬೆಂಬಲಿತರು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 1100 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದರೆ, ಕಾಂಗ್ರೆಸ್ ಕೇವಲ 450 ಸ್ಥಾನಗಳನ್ನು ಗಳಿಸಿದೆ. ಎಸ್ ಡಿಪಿಐ ಬೆಂಬಲಿತರು ಎಂಟು ಸ್ಥಾನಗಳನ್ನು ಪಡೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿ ಅವಿರೋಧ ಆಯ್ಕೆಯಾಗಿದ್ದರು.
ಹೀಗಿದ್ದರೂ, ಪೂರ್ತಿಯಾಗಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3131 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2863 ಸ್ಥಾನಗಳ ಫಲಿತಾಂಶ ಬಂದಿದೆ. ಉಡುಪಿಯಲ್ಲಿ 2385 ಸ್ಥಾನಗಳಲ್ಲಿ 1750 ಸ್ಥಾನಗಳ ಫಲಿತಾಂಶ ಮಾತ್ರ ಹೊರಬಿದ್ದಿದೆ.
Gram Panchayat Elections 2020 BJP Bags major Victory in Sullia, Belthangady, Puttur, Moodbidri and Mangalore.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm