ಬ್ರೇಕಿಂಗ್ ನ್ಯೂಸ್
11-01-26 07:06 pm Mangaluru Staffer ಕರಾವಳಿ
ಮಂಗಳೂರು, ಜ.11: ‘ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಆಗುತ್ತಿರುವುದನ್ನು ಭಾರತ ಸರ್ಕಾರ ಸುಮ್ಮನೆ ನೋಡುತ್ತಾ ಕೂರಬಾರದು, ಈ ಕುರಿತು ತಕ್ಷಣ ಕ್ರಮ ತೆಗೆದುಕೊಳ್ಳಬೇಕು’ ಎಂದು ದಿ ಪ್ರಿಂಟ್ ಪತ್ರಿಕೆಯ ಸಲಹಾ ಸಂಪಾದಕಿ ಹಾಗೂ ಓಪಿ ಜಿಂದಾಲ್ ಶಿಕ್ಷಣ ಸಂಸ್ಥೆಯ ಅಸೋಸಿಯೇಟ್ ಪ್ರೊಫೆಸರ್ ಡಾ. ಸ್ವಸ್ತಿ ರಾವ್ ಹೇಳಿದರು.
ಮಂಗಳೂರು ಲಿಟ್ ಫೆಸ್ಟ್ 8ನೇ ಆವೃತ್ತಿಯ ಎರಡನೇ ದಿನ ನಡೆದ ನೆರೆ ಹೊರೆ ರಾಷ್ಟ್ರಗಳ ಸವಾಲುಗಳು ಎಂಬ ಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಬಂಧಗಳ ಕುರಿತು ಮಾತನಾಡಿದರು. ‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಆತಂಕಕಾರಿಯಾಗಿದೆ. 1971ರಲ್ಲಿ ಬಾಂಗ್ಲಾದೇಶದಲ್ಲಿ ಬಹಳ ಸಮಸ್ಯೆ ಉದ್ಭವವಾದಾಗ, ಭಾರತ ಮಧ್ಯೆ ಪ್ರವೇಶಿಸಿ ಜನರ ರಕ್ಷಣೆಗೆ ಮುಂದಾಗಿತ್ತು. ಆದರೆ ಈಗ ಮತ್ತೆ ಅಲ್ಲಿ ಹಿಂದೂಗಳ ಹತ್ಯೆಯಾಗುತ್ತಿದೆ. ಹಿಂದೂ ಹತ್ಯೆಗಳ ವಿಚಾರವಾಗಿ ಭಾರತ ಸರ್ಕಾರ ಏನಾದರೂ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.
‘ಭಾರತವು ಎಲ್ಲಾ ದೇಶಗಳೊಂದಿಗೆ ಒಳ್ಳೆಯ ಸಂಬಂಧ ಹೊಂದಿದೆ. ಅಮೇರಿಕಾ, ರಷ್ಯಾ, ಯೂರೋಪಿಯನ್ ಯೂನಿಯನ್, ಆಫ್ರಿಕನ್ ಯೂನಿಯನ್ ಹೀಗೆ ಎಲ್ಲರೊಂದಿಗೆ ಒಳ್ಳೆಯ ಸಂಬಂಧ ಹೊಂದಿದೆ. ಇನ್ನು, ನೆರೆ ರಾಷ್ಟ್ರಗಳ ಬಗ್ಗೆ ಹೇಳುವುದಾದರೆ, ಎಲ್ಲಾ ದೇಶಗಳಿಗೆ ಸಾಕಷ್ಟು ಸಹಾಯಹಸ್ತ ಚಾಚಿದೆ. ಆ ರಾಷ್ಟ್ರಗಳು ಮುಂದಿನ ದಿನಗಳಲ್ಲಿ ದೊಡ್ಡ ರೀತಿಯಲ್ಲಿ ಬೆಂಬಲವಾಗಿ ನಿಲ್ಲಬೇಕು ಮತ್ತು ನಿಲ್ಲಲಿವೆ’ ಎಂದು ಹೇಳಿದರು.
ಸಾರ್ಕ್ ದೇಶಗಳ ಮೇಲೆ ಚೀನಾ ಕ್ರಮೇಣ ಹಿಡಿತ ಸಾಧಿಸುತ್ತಿರುವ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಸಾರ್ಕ್ ವಿಷಯದಲ್ಲಿ ಭಾರತ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಪ್ರಮುಖವಾಗಿ, ಭಯೋತ್ಪಾದನೆಗೆ ಪಾಕಿಸ್ತಾನ ಪ್ರೋತ್ಸಾಹಿಸುತ್ತಿರುವ ಕಾರಣದಿಂದ ಭಾರತ ಕೆಲವು ವರ್ಷಗಳ ಹಿಂದೆ ಸಾರ್ಕ್ ಸಮ್ಮೇಳನಕ್ಕೆ ಬಹಿಷ್ಕಾರ ಹಾಕಿತ್ತು. ಆದರೆ ಭಾರತವು ಸಾರ್ಕ್ ಸಮ್ಮೇಳನವನ್ನು ಸಂಪೂರ್ಣವಾಗಿ ನಿಷೇಧಿಸಬಾರದು. ಅದಕ್ಕೆ ಪ್ರತಿಯಾಗಿ ಬೇರೆ ಕಾರ್ಯತಂತ್ರವನ್ನು ಕಂಡುಕೊಳ್ಳಬೇಕು. ಇಲ್ಲದಿದ್ದರೆ ಚೀನಾ ಹಿಡಿತ ಸಾಧಿಸಲಿದೆ. ಚೀನಾ ಹಿಡಿತ ಸಾಧಿಸುವುದಕ್ಕೆ ಮೊದಲು ಹೊಸ ಪರಿಹಾರವನ್ನು ಕಂಡುಕೊಳ್ಳಬೇಕು’ ಎಂದು ಹೇಳಿದರು.
ಇದೇ ಸಂವಾದದಲ್ಲಿ ವಿಶ್ವಸಂಸ್ಥೆಯ ಖಾಯಂ ರಾಯಭಾರಿ ರುಚಿರಾ ಕಾಂಬೋಜ್ ಪಾಲ್ಗೊಂಡು ಭಾರತದ ರಾಜತಾಂತ್ರಿಕ ವಿಚಾರಗಳ ಮೇಲೆ ಬೆಳಕು ಚೆಲ್ಲಿದರು. ‘ನೆರೆ ರಾಷ್ಟ್ರಗಳಿಗೆ ಭಾರತದ ಕೊಡುಗೆ ದೊಡ್ಡದು. ನೆರೆರಾಷ್ಟ್ರಗಳಲ್ಲಿ ಯಾವುದೇ ಸಮಸ್ಯೆಗಳಾದಾಗ, ನೈಸರ್ಗಿಕ ವಿಪತ್ತುಗಳಾದಾಗ, ಭಾರತವು ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿದೆ. ತುರ್ತು ಪರಿಸ್ಥಿತಿ ಏರ್ಪಟ್ಟ ಸಂದರ್ಭದಲ್ಲಿ ಸಹಾಯಕ್ಕೆ ನಿಂತಿದೆ. ಇಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯವಾಗಿದ್ದು, ಭಾರತವು ತನ್ನ ಮೇಲೆ ನಂಬಿಕೆ ಇಟ್ಟು ಬಂದವರ ಜೊತೆಗೆ ಯಾವತ್ತೂ ವಿಶ್ವಾಸ ಉಳಿಸಿಕೊಂಡಿದೆ’ ಎಂದು ಹೇಳಿದರು. ಡಾ. ಬಿದ್ದಂಡ ಚೆಂಗಪ್ಪ ಕಾರ್ಯಕ್ರಮ ನಿರ್ವಹಣೆ ಮಾಡಿದರು.
Advisory Editor of The Print and Associate Professor at O.P. Jindal Global University, Dr Swasti Rao, on Saturday said the Government of India should not sit silently while Hindus are being killed in Bangladesh, and urged New Delhi to take immediate action on the issue.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm