ಬ್ರೇಕಿಂಗ್ ನ್ಯೂಸ್
15-01-26 10:07 pm Mangalore Correspondent ಕರಾವಳಿ
ಉಳ್ಳಾಲ, ಜ.15 : ಹಸುಗಳ ಸಂತತಿಯನ್ನು ಉಳಿಸುವುದೇ ಇಂದು ದೊಡ್ಡ ಸವಾಲಾಗಿ ಪರಿಣಮಿಸಿದ್ದು ಗೋರಕ್ಷಣೆಗೆ ಜನಸಾಮಾನ್ಯರು ಕೂಡ ತಮ್ಮ ,ತಮ್ಮ ಕೊಡುಗೆ ಮತ್ತು ಸೇವೆಯನ್ನ ನೀಡುವ ನಿಟ್ಟಿನಲ್ಲಿ ರಾಘವೇಶ್ವರ ಭಾರತೀ ಮಹಾಸ್ವಾಮಿಯವರ ಮಾರ್ಗದರ್ಶನದಲ್ಲಿ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಗೋಸೇವಾ ಮಾಸಾಚರಣೆಗೆ ಚಾಲನೆ ದೊರೆಯಿತು.
ಬುಧವಾರ ಸಂಜೆ ಗೋಧೂಳಿ ಲಗ್ನದಲ್ಲಿ ಭಜನಾ ಸಂಕೀರ್ತನಕಾರರು ಹಾಗೂ ತರಬೇತುದಾರರಾದ ದೀನ್ ರಾಜ್ ಕಳವಾರು ಅವರು ಗೋಸೇವಾ ಮಾಸಾಚರಣೆಯನ್ನು ಉದ್ಘಾಟಿಸಿದರು. ಅಮೃತಧಾರಾ ಗೋಶಾಲೆಯ ಸಂಚಾಲಕರಾದ ಟಿ.ಜಿ. ರಾಜಾರಾಮ ಭಟ್ ಮಾತನಾಡಿ ಕಳೆದ ಮೂರು ವರ್ಷಗಳ ಗೋ ಮಾಸಾಚರಣೆಯ ಯಶಸ್ಸು ನಾಲ್ಕನೇ ವರ್ಷದ ತುಡಿತಕ್ಕೆ ಕಾರಣವಾಗಿದೆ. ಮಕರ ಸಂಕ್ರಮಣದಿಂದ ಕುಂಭ ಸಂಕ್ರಮಣದ ವರೆಗೆ ಒಂದು ತಿಂಗಳ ಕಾಲ ಗೋಮಾಸಾಚರಣೆ ಆಚರಿಸಲ್ಪಡುತ್ತದೆ. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಸಹ ಇಲ್ಲಿಗೆ ಬಂದು ಸಂಭ್ರಮಿಸುವುದರ ಜೊತೆಗೆ ಗೋವುಗಳ ಸೇವೆಗೈದು ಕೃತಾರ್ಥರಾಗುತ್ತಾರೆ. ಗೋಮಾಸಾಚರಣೆ ಪ್ರಯುಕ್ತ ಶುದ್ಧ ಭಾರತೀಯ ಶೈಲಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ರಕ್ತ ಮತ್ತು ಹಣ ನಿಂತಲ್ಲೇ ನಿಲ್ಲದೆ ನಿರಂತರವಾಗಿ ಚಲನೆಯಲ್ಲಿರಬೇಕು. ಕೂಡಿಟ್ಟ ಧನವನ್ನು ಇಂತಹ ಅರ್ಥಪೂರ್ಣ ಕಾರ್ಯಗಳಿಗೆ ವಿನಿಯೋಗಿಸಬೇಕು. ಧನ ಸಹಾಯ ಮಾಡಿ ಅಂತ ನಾವು ಯಾರಲ್ಲೂ ಕೇಳಲ್ಲ, ಸಾಧ್ಯವಾದಲ್ಲಿ ಹಸುಗಳಿಗೆ ಸಹಾಯ ಮಾಡುವವರನ್ನ ಇಲ್ಲಿಗೆ ಕರೆತನ್ನಿ. ಆರಂಭದಲ್ಲಿ ಈ ಪ್ರದೇಶದಲ್ಲಿ ಮಲೆನಾಡು ಗಿಡ್ಡ ತಳಿ ಹಸುಗಳ ಪಾಲನಾ ಕೇಂದ್ರವನ್ನು ಆರಂಭಿಸಿದ್ದೆವು. ನಂತರದ ದಿನಗಳಲ್ಲಿ ಪೊಲೀಸರು ಕಟುಕರಿಂದ ವಶಪಡಿಸಿದ ಹಸುಗಳನ್ನ ತಂದು ಬಿಟ್ಟ ಪರಿಣಾಮ ಗೋಶಾಲೆ ವಿಸ್ತಾರಗೊಂಡು ಇಂದು ವಿವಿಧ ತಳಿಗಳ ಹಸುಗಳು ಇಲ್ಲಿ ಆಶ್ರಯ ಪಡೆದಿವೆಯೆಂದರು.







ಕಣಂತೂರು ಕ್ಷೇತ್ರದ ಆಡಳಿತ ಮೊಕ್ತೇಸರರಾದ ದೇವಿಪ್ರಸಾದ್ ಪೊಯ್ಯತ್ತಾಯ ಮಾತನಾಡಿ ಗೋಮಾಸಾಚರಣೆ ಒಂದು ವಿಭಿನ್ನ ಪರಿಕಲ್ಪನೆಯಾಗಿದ್ದು ಆ ಮೂಲಕ ನಾವೂ ಕೂಡ ಗೋವುಗಳ ಸೇವೆಗೈಯಲು ಅವಕಾಶ ಸಿಕ್ಕಿದಂತಾಗಿದೆ. ಗೋವುಗಳೆಂದರೆ ನಮ್ಮಲ್ಲೀಗ ತಾತ್ಸಾರ ಮನೋಭಾವ ಉಂಟಾಗಿದೆ. ಹಿಂದೆ ಪ್ರತಿಯೊಬ್ಬರ ಮನೆಯಲ್ಲೂ ದನಗಳಿದ್ದವು, ಅವುಗಳ ಪೋಷಣೆ ಕಷ್ಟವೆಂದು ನಾವು ಗೋಸಾಕಣೆಯಿಂದ ವಿಮುಖರಾಗುತ್ತ ಬಂದಿದ್ದೇವೆ. ಇಂತಹ ಜನಜಾಗೃತಿ ಕಾರ್ಯಕ್ರಮಗಳಿಂದ ಮಕ್ಕಳಲ್ಲಾದರೂ ಗೋಸಾಕಣೆಯ ಬಗೆಗಿನ ಕಾಳಜಿ ಮೂಡುವಂತಾಗುತ್ತದೆಯೆಂದರು.
ಇನೋಳಿ ಶ್ರೀ ಸೋಮನಾಥ ದುರ್ಗಾಪರಮೇಶ್ವರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕಿಲ್ಲೂರುಗುತ್ತು ಚಂದ್ರಹಾಸ ಪೂಂಜ, ಕಣಂತೂರು ಕ್ಷೇತ್ರದ ಆನುವಂಶಿಕ ಮೊಕ್ತೇಸರರಾದ ಪದ್ಮನಾಭ ರೈ ಯಾನೆ ಮಂಜು ಭಂಡಾರಿ ನಾರ್ಯಗುತ್ತು, ಕೂಟತ್ತಜೆ ಉಳ್ಳಾಲ್ತಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಶೈಲೇಂದ್ರ ಭರತ್ ನಾಯ್ಕ್ ನಚ್ಚ ಮೊದಲಾದವರು ಉಪಸ್ಥಿತರಿದ್ದರು.
With the conservation of indigenous cattle emerging as a major challenge, a month-long ‘Gomasaacharana’ (Cow Service Month) was inaugurated at Amrutadhara Gaushala in Punyakoti Nagar of Kairangala village, under the guidance of Sri Raghaveshwara Bharati Mahaswamiji. The initiative provides a platform for the general public to actively contribute to cow protection and service.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm