ಬ್ರೇಕಿಂಗ್ ನ್ಯೂಸ್
15-01-26 10:24 pm Mangalore Correspondent ಕರಾವಳಿ
ಮಂಗಳೂರು, ಜ.15 : ಜನರಿಗೆ ಮನೆ, ಕಾರು, ಚಿನ್ನದ ಆಮಿಷ ಒಡ್ಡಿ ಜನರಿಂದ ಸಾವಿರಾರು ಮಂದಿಗೆ ಪಂಗನಾಮ ಹಾಕುತ್ತಿರುವ ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಒತ್ತಾಯಿಸಿದರು. ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಂಪೆನಿಯಿಂದ ವಂಚನೆಗೆ ಒಳಗಾದ ಸಂತ್ರಸ್ತರ ಪ್ರತಿಭಟನೆಯಲ್ಲಿ ಮಾತನಾಡಿದರು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗಿದೆ. ಮಂಗಳೂರಿನಲ್ಲಿ ಸುಮಾರು 100ಕ್ಕೂ ಹೆಚ್ಚು ಬ್ಲೇಡ್ ಕಂಪೆನಿಗಳು ಸಾವಿರಾರು ಕೋಟಿ ಜನರಿಂದ ಸಂಗ್ರಹಿಸಿದೆ, ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ ಇವರ ವಂಚನಾ ಜಾಲ ವಿಸ್ತರಣೆ ಆಗಿದೆ. ಜಿಲ್ಲೆಯಲಿರುವ ಎಲ್ಲಾ ಲಕ್ಕಿ ಸ್ಕೀಮ್ ಗಳು ಕಾನೂನು ಬಾಹಿರವಾಗಿ ಕಾರ್ಯಾಚರಿಸುತ್ತಿದೆ, ಇವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಒತ್ತಾಯಿಸಿದರು.


ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ ಬಡವರ ಪ್ರಾಮಾಣಿಕತೆಯನ್ನು ಹೈಜಾಕ್ ಮಾಡಲಾಗಿದೆ, ಮಕ್ಕಳ ವಿದ್ಯಾಭ್ಯಾಸ, ಹೆಣ್ಣು ಮಕ್ಕಳ ಮದುವೆಗೆ ಸಹಾಯ ಆಗಲೆಂದು ಹೂಡಿಕೆ ಮಾಡಿದ್ದ ಬಡಪಾಯಿಗಳಿಗೆ ಅನ್ಯಾಯ ಆಗಿದೆ. ನ್ಯೂ ಇಂಡಿಯಾ ಕಂಪೆನಿ ಮಾಲೀಕನಿಂದ 50 ಕೋಟಿಯ ವಂಚನೆ ಆಗಿದೆ. ಪ್ರಭಾವಿ ರಾಜಕಾರಣಿಗಳ ಸಹಕಾರದಿಂದಾಗಿ ಈ ರೀತಿಯ ವಂಚನೆ ಮಾಡಲು ಸಾಧ್ಯವಾಗಿದೆ. ಪೊಲೀಸರು ಮತ್ತು ಲೀಡ್ ಬ್ಯಾಂಕ್ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಂಡಿದ್ದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ವಂಚನೆ ಆಗುತ್ತಿರಲಿಲ್ಲ ಎಂದು ಅವರು ಹೇಳಿದರು.
ಸಿಐಟಿಯು ಮುಖಂಡರಾದ ಯೋಗೀಶ್ ಜಪ್ಪಿನಮೊಗರು, ಡಿವೈಎಫ್ಐ ಮುಖಂಡ ತಯ್ಯುಬ್ ಬೆಂಗ್ರೆ, ಸಂತ್ರಸ್ತರ ವೇದಿಕೆಯ ಸಹ ಸಂಚಾಲಕ ಸಮದ್ ಕಾಟಿಪಳ್ಳ ಮಾತನಾಡಿದರು. ಪ್ರತಿಭಟನೆಯ ನೇತೃತ್ವವನ್ನು ಸಂತ್ರಸ್ತರ ವೇದಿಕೆಯ ಪ್ರಮುಖರಾದ ಪರ್ವೀಜ್ ಬಂದರ್, ಖಲೀಲ್ ಬೆಂಗ್ರೆ, ನಟೇಶ್, ರಾಮ್ ಸುರತ್ಕಲ್, ಮನ್ಸೂರ್ ಅಡ್ಡೂರು, ಫಾರೂಕ್ ಕುಕ್ಕಾಜೆ, ಅಬ್ದುಲ್ ಅಜೀಜ್ ಕೃಷ್ಣಾಪುರ, ಖಾಸಿಂ ಕಾಟಿಪಳ್ಳ, ಸನಾ ಮಣಿಪಾಲ, ಜಯಲಕ್ಷ್ಮಿ ಉಳ್ಳಾಲ, ಖೈರುನ್ನೀಸ ಉಚ್ಚಿಲ, ಸುಜಾತ ಮಧ್ಯಪದವು, ಸುಹಾನಾ ಬೆಂಗಳೂರು, ಫೈಝಲ್ ಚಿಕ್ಕಮಗಳೂರು, ಮೊಹಮ್ಮದ್ ಪಾಷ ಶಿವಮೊಗ್ಗ ವಹಿಸಿದ್ದರು.
Alleging large-scale financial fraud targeting the public, DYFI district president B.K. Imtiyaz demanded strict action against so-called lucky scheme companies that lure people with promises of houses, cars and gold. He was speaking at a protest organised by victims allegedly cheated by the New India Lucky Scheme Company.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm