ಬ್ರೇಕಿಂಗ್ ನ್ಯೂಸ್
15-01-26 10:24 pm Mangalore Correspondent ಕರಾವಳಿ
ಮಂಗಳೂರು, ಜ.15 : ಜನರಿಗೆ ಮನೆ, ಕಾರು, ಚಿನ್ನದ ಆಮಿಷ ಒಡ್ಡಿ ಜನರಿಂದ ಸಾವಿರಾರು ಮಂದಿಗೆ ಪಂಗನಾಮ ಹಾಕುತ್ತಿರುವ ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಒತ್ತಾಯಿಸಿದರು. ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಂಪೆನಿಯಿಂದ ವಂಚನೆಗೆ ಒಳಗಾದ ಸಂತ್ರಸ್ತರ ಪ್ರತಿಭಟನೆಯಲ್ಲಿ ಮಾತನಾಡಿದರು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗಿದೆ. ಮಂಗಳೂರಿನಲ್ಲಿ ಸುಮಾರು 100ಕ್ಕೂ ಹೆಚ್ಚು ಬ್ಲೇಡ್ ಕಂಪೆನಿಗಳು ಸಾವಿರಾರು ಕೋಟಿ ಜನರಿಂದ ಸಂಗ್ರಹಿಸಿದೆ, ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ ಇವರ ವಂಚನಾ ಜಾಲ ವಿಸ್ತರಣೆ ಆಗಿದೆ. ಜಿಲ್ಲೆಯಲಿರುವ ಎಲ್ಲಾ ಲಕ್ಕಿ ಸ್ಕೀಮ್ ಗಳು ಕಾನೂನು ಬಾಹಿರವಾಗಿ ಕಾರ್ಯಾಚರಿಸುತ್ತಿದೆ, ಇವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಒತ್ತಾಯಿಸಿದರು.


ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ ಬಡವರ ಪ್ರಾಮಾಣಿಕತೆಯನ್ನು ಹೈಜಾಕ್ ಮಾಡಲಾಗಿದೆ, ಮಕ್ಕಳ ವಿದ್ಯಾಭ್ಯಾಸ, ಹೆಣ್ಣು ಮಕ್ಕಳ ಮದುವೆಗೆ ಸಹಾಯ ಆಗಲೆಂದು ಹೂಡಿಕೆ ಮಾಡಿದ್ದ ಬಡಪಾಯಿಗಳಿಗೆ ಅನ್ಯಾಯ ಆಗಿದೆ. ನ್ಯೂ ಇಂಡಿಯಾ ಕಂಪೆನಿ ಮಾಲೀಕನಿಂದ 50 ಕೋಟಿಯ ವಂಚನೆ ಆಗಿದೆ. ಪ್ರಭಾವಿ ರಾಜಕಾರಣಿಗಳ ಸಹಕಾರದಿಂದಾಗಿ ಈ ರೀತಿಯ ವಂಚನೆ ಮಾಡಲು ಸಾಧ್ಯವಾಗಿದೆ. ಪೊಲೀಸರು ಮತ್ತು ಲೀಡ್ ಬ್ಯಾಂಕ್ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಂಡಿದ್ದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ವಂಚನೆ ಆಗುತ್ತಿರಲಿಲ್ಲ ಎಂದು ಅವರು ಹೇಳಿದರು.
ಸಿಐಟಿಯು ಮುಖಂಡರಾದ ಯೋಗೀಶ್ ಜಪ್ಪಿನಮೊಗರು, ಡಿವೈಎಫ್ಐ ಮುಖಂಡ ತಯ್ಯುಬ್ ಬೆಂಗ್ರೆ, ಸಂತ್ರಸ್ತರ ವೇದಿಕೆಯ ಸಹ ಸಂಚಾಲಕ ಸಮದ್ ಕಾಟಿಪಳ್ಳ ಮಾತನಾಡಿದರು. ಪ್ರತಿಭಟನೆಯ ನೇತೃತ್ವವನ್ನು ಸಂತ್ರಸ್ತರ ವೇದಿಕೆಯ ಪ್ರಮುಖರಾದ ಪರ್ವೀಜ್ ಬಂದರ್, ಖಲೀಲ್ ಬೆಂಗ್ರೆ, ನಟೇಶ್, ರಾಮ್ ಸುರತ್ಕಲ್, ಮನ್ಸೂರ್ ಅಡ್ಡೂರು, ಫಾರೂಕ್ ಕುಕ್ಕಾಜೆ, ಅಬ್ದುಲ್ ಅಜೀಜ್ ಕೃಷ್ಣಾಪುರ, ಖಾಸಿಂ ಕಾಟಿಪಳ್ಳ, ಸನಾ ಮಣಿಪಾಲ, ಜಯಲಕ್ಷ್ಮಿ ಉಳ್ಳಾಲ, ಖೈರುನ್ನೀಸ ಉಚ್ಚಿಲ, ಸುಜಾತ ಮಧ್ಯಪದವು, ಸುಹಾನಾ ಬೆಂಗಳೂರು, ಫೈಝಲ್ ಚಿಕ್ಕಮಗಳೂರು, ಮೊಹಮ್ಮದ್ ಪಾಷ ಶಿವಮೊಗ್ಗ ವಹಿಸಿದ್ದರು.
Alleging large-scale financial fraud targeting the public, DYFI district president B.K. Imtiyaz demanded strict action against so-called lucky scheme companies that lure people with promises of houses, cars and gold. He was speaking at a protest organised by victims allegedly cheated by the New India Lucky Scheme Company.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm