ಬ್ರೇಕಿಂಗ್ ನ್ಯೂಸ್
16-01-26 07:33 pm Mangalore Correspondent ಕರಾವಳಿ
ಮಂಗಳೂರು, ಜ.16 : ಕರಾವಳಿಯ ಸಾರಿಗೆ ಸಂಪರ್ಕ ಹಾಗೂ ಪ್ರವಾಸೋದ್ಯಮಕ್ಕೆ ಹೊಸ ವೇಗ ನೀಡಲು ಕರ್ನಾಟಕ ಕರಾವಳಿ ಜಲಸಾರಿಗೆ ಮಂಡಳಿ (ಮರಿಟೈಮ್ ಬೋರ್ಡ್) ಎರಡು ಬೃಹತ್ ಯೋಜನೆಗಳನ್ನು ಘೋಷಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಸಂಚಾರ ದಟ್ಟಣೆಗೆ ಪರ್ಯಾಯವಾಗಿ ಮಂಗಳೂರಿನಿಂದ ಕುಂದಾಪುರದ ಮರವಂತೆಯ ವರೆಗೆ ಸಾಗರ ಮಾರ್ಗದ ‘ಫೆರ್ರಿ’ (ದೋಣಿ) ಸೇವೆ ಮತ್ತು ಮಂಗಳೂರು ನಗರದ ಸುತ್ತಮುತ್ತ ‘ಜಲ ಮೆಟ್ರೋ’ ಜಾರಿಗೆ ಯೋಜನೆ ರೂಪಿಸಿದೆ.
ಮಂಗಳೂರು - ಮರವಂತೆ ಕರಾವಳಿ ಫೆರ್ರಿ ಸೇವೆ
ಮಂಗಳೂರಿನಿಂದ ಕುಂದಾಪುರ ತಾಲೂಕಿನ ಮರವಂತೆಯ ವರೆಗೆ ಸುಮಾರು 110 ಕಿ.ಮೀ. ಉದ್ದದ ಜಲಮಾರ್ಗವನ್ನು ಅಭಿವೃದ್ಧಿಪಡಿಸುತ್ತಿದೆ. ಫೆರ್ರಿ ಸೇವೆಯು ಹಳೆ ಮಂಗಳೂರು ಬಂದರು, ಹೆಜಮಾಡಿ, ಮಲ್ಪೆ, ಕೋಟ ಮತ್ತು ಮರವಂತೆ ಹೀಗೆ ಒಟ್ಟು ಐದು ಕಡೆಗಳಲ್ಲಿ ನಿಲುಗಡೆ ಹೊಂದಿರಲಿದೆ. ಅಂದಾಜು 37.8 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನ ಗೊಳಿಸಲಾಗುವುದು. ಆಯ್ಕೆಯಾದ ಸಂಸ್ಥೆಗೆ 20 ವರ್ಷಗಳ ಕಾಲ ನಿರ್ವಹಣೆಯ ಜವಾಬ್ದಾರಿ ನೀಡಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಿಲುಗಡೆ ಇರುವ ಐದೂ ಸ್ಥಳಗಳಲ್ಲಿ ಅತ್ಯಾಧುನಿಕ ಜೆಟ್ಟಿಗಳನ್ನು (ದೋಣಿ ನಿಲ್ದಾಣ) ನಿರ್ಮಿಸಲು ಉದ್ದೇಶಿಸಲಾಗಿದೆ.
ಮಂಗಳೂರಿಗೆ ಜಲ ಮೆಟ್ರೋ ಯೋಜನೆ
ಇದೇ ವೇಳೆ, ಮಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸುಮಾರು 180 ಕೋಟಿ ರೂ. ಹೂಡಿಕೆಯೊಂದಿಗೆ ‘ಜಲ ಮೆಟ್ರೋ’ ಯೋಜನೆಯನ್ನು ರೂಪಿಸಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಮಳವೂರು ಸೇತುವೆಯಿಂದ ಜಪ್ಪಿನಮೊಗರು ಸೇತುವೆಯ ವರೆಗೆ ಈ ಸೇವೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಗುರುಪುರ ಮತ್ತು ನೇತ್ರಾವತಿ ನದಿಗಳ ಮೂಲಕ ಹಳೆ ಮಂಗಳೂರು ಬಂದರನ್ನು ಸಂಪರ್ಕಿಸುವ ಈ ಮಾರ್ಗವು ನಗರದ ವಿವಿಧ ಭಾಗಗಳನ್ನು ಜೋಡಿಸಲಿದೆ.
ಪ್ರವಾಸೋದ್ಯಮಕ್ಕೆ ಬೂಸ್ಟ್ ಸಾಧ್ಯತೆ
ಮರವಂತೆಯಂತಹ ಪ್ರವಾಸಿ ತಾಣಗಳಿಗೆ ಸಮುದ್ರ ಮಾರ್ಗದ ಮೂಲಕ ಪ್ರಯಾಣಿಸುವುದು ಪ್ರವಾಸಿಗರಿಗೆ ಹೊಸ ಅನುಭವ ನೀಡಲಿದೆ. ಪರಿಸರ ಸ್ನೇಹಿ ಮತ್ತು ಕಡಿಮೆ ವೆಚ್ಚದ ಈ ಜಲ ಸಾರಿಗೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆರ್ಥಿಕತೆಗೆ ದೊಡ್ಡ ಬಲ ನೀಡಲಿದೆ ಎಂದು ಮಂಡಳಿಯ ಅಧಿಕಾರಿಗಳು ಆಶಿಸಿದ್ದಾರೆ.
The Karnataka Maritime Board has announced plans to introduce a sea-route ferry service between Mangaluru and Maravanthe, along with a Water Metro project in Mangaluru. Aimed at easing NH-66 traffic and boosting coastal tourism, the projects are expected to improve connectivity and provide an eco-friendly transport alternative.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm