ಬ್ರೇಕಿಂಗ್ ನ್ಯೂಸ್
18-01-26 09:58 pm Mangalore Correspondent ಕರಾವಳಿ
ಪುತ್ತೂರು, ಜ.18 : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಲ್ಕುಂದ ಎಂಬಲ್ಲಿ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (37) ಹಾಗೂ ಸುಜಿತ್ (26) ಎಂದು ಗುರುತಿಸಲಾಗಿದೆ.
ಮೃತ ಯುವಕರಿಬ್ಬರೂ ಅವಿವಾಹಿತರಾಗಿದ್ದು, ತಮ್ಮ ಸ್ನೇಹಿತರೊಂದಿಗೆ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಈ ವೇಳೆ, ಸುಜಿತ್ ಸ್ನಾನಕ್ಕೆಂದು ಕುಲ್ಕುಂದದಲ್ಲಿ ಕುಮಾರಧಾರ ನದಿಗೆ ಇಳಿದಿದ್ದು, ಆತನಿಗೆ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾನೆ. ಈ ವೇಳೆ ಹರಿಪ್ರಸಾದ್ ರಕ್ಷಣೆಗಾಗಿ ನದಿಗೆ ಇಳಿದಿದ್ದು ಇಬ್ಬರೂ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನೀರಿನಲ್ಲಿ ಮುಳುಗಿದ ಇಬ್ಬರ ಮೃತದೇಹ ತುಸು ದೂರ ನದಿಯ ದಡದಲ್ಲಿದ್ದು ನದಿಯಿಂದ ಮೇಲಕ್ಕೆತ್ತಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹರಿಪ್ರಸಾದ್ ಅವರು ಸುಬ್ರಹ್ಮಣ್ಯದಲ್ಲಿ ಅನುಗ್ರಹ ಎಂಟರ್ ಪ್ರೈಸಸ್ ಹೆಸರಿನ ಹಾರ್ಡ್ ವೇರ್ ಅಂಗಡಿ ನಡೆಸುತ್ತಿದ್ದರು. ಅದೇ ಅಂಗಡಿಯಲ್ಲಿ ಸುಜಿತ್ ಕೆಲಸಕ್ಕಿದ್ದರು. ವನಭೋಜನ ಸಲುವಾಗಿ ಭಾನುವಾರ ಮಧ್ಯಾಹ್ನ ಇತರ ಹತ್ತು ಮಂದಿ ಸ್ನೇಹಿತರು ಕುಮಾರಧಾರಾ ನದಿಯ ಬಳಿಗೆ ಬಂದಿದ್ದರು. ಸಂಜೆಯ ವೇಳೆಗೆ ಸ್ನಾನಕ್ಕೆ ಹೋದ ಸಂದರ್ಭದಲ್ಲಿ ಅನಾಹುತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Two young men from Sullia, Hariprasad (37) and Sujith (26), drowned in the Kumaradhara River near Kukke Subrahmanya while bathing during a picnic. Sujith, who could not swim, slipped into deep water, and Hariprasad drowned while trying to rescue him. Police have registered a case and are investigating the incident.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm