ಬ್ರೇಕಿಂಗ್ ನ್ಯೂಸ್
18-01-26 09:58 pm Mangalore Correspondent ಕರಾವಳಿ
ಪುತ್ತೂರು, ಜ.18 : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮೀಪದ ಕುಲ್ಕುಂದ ಎಂಬಲ್ಲಿ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (37) ಹಾಗೂ ಸುಜಿತ್ (26) ಎಂದು ಗುರುತಿಸಲಾಗಿದೆ.
ಮೃತ ಯುವಕರಿಬ್ಬರೂ ಅವಿವಾಹಿತರಾಗಿದ್ದು, ತಮ್ಮ ಸ್ನೇಹಿತರೊಂದಿಗೆ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಈ ವೇಳೆ, ಸುಜಿತ್ ಸ್ನಾನಕ್ಕೆಂದು ಕುಲ್ಕುಂದದಲ್ಲಿ ಕುಮಾರಧಾರ ನದಿಗೆ ಇಳಿದಿದ್ದು, ಆತನಿಗೆ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾನೆ. ಈ ವೇಳೆ ಹರಿಪ್ರಸಾದ್ ರಕ್ಷಣೆಗಾಗಿ ನದಿಗೆ ಇಳಿದಿದ್ದು ಇಬ್ಬರೂ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನೀರಿನಲ್ಲಿ ಮುಳುಗಿದ ಇಬ್ಬರ ಮೃತದೇಹ ತುಸು ದೂರ ನದಿಯ ದಡದಲ್ಲಿದ್ದು ನದಿಯಿಂದ ಮೇಲಕ್ಕೆತ್ತಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹರಿಪ್ರಸಾದ್ ಅವರು ಸುಬ್ರಹ್ಮಣ್ಯದಲ್ಲಿ ಅನುಗ್ರಹ ಎಂಟರ್ ಪ್ರೈಸಸ್ ಹೆಸರಿನ ಹಾರ್ಡ್ ವೇರ್ ಅಂಗಡಿ ನಡೆಸುತ್ತಿದ್ದರು. ಅದೇ ಅಂಗಡಿಯಲ್ಲಿ ಸುಜಿತ್ ಕೆಲಸಕ್ಕಿದ್ದರು. ವನಭೋಜನ ಸಲುವಾಗಿ ಭಾನುವಾರ ಮಧ್ಯಾಹ್ನ ಇತರ ಹತ್ತು ಮಂದಿ ಸ್ನೇಹಿತರು ಕುಮಾರಧಾರಾ ನದಿಯ ಬಳಿಗೆ ಬಂದಿದ್ದರು. ಸಂಜೆಯ ವೇಳೆಗೆ ಸ್ನಾನಕ್ಕೆ ಹೋದ ಸಂದರ್ಭದಲ್ಲಿ ಅನಾಹುತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Two young men from Sullia, Hariprasad (37) and Sujith (26), drowned in the Kumaradhara River near Kukke Subrahmanya while bathing during a picnic. Sujith, who could not swim, slipped into deep water, and Hariprasad drowned while trying to rescue him. Police have registered a case and are investigating the incident.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm