ಬ್ರೇಕಿಂಗ್ ನ್ಯೂಸ್
20-01-26 10:59 pm Mangalore Correspondent ಕರಾವಳಿ
ಮಂಗಳೂರು, ಜ.20 : ನಗರದ ಹೊಯ್ಗೆ ಬಜಾರ್ ನಲ್ಲಿರುವ 158 ವರ್ಷಗಳ ಇತಿಹಾಸವುಳ್ಳ, ದೇಶದ ಮೊದಲ ಟೈಲ್ ಫ್ಯಾಕ್ಟರಿಯೆಂದು ಹೆಸರಾಗಿರುವ ಮಂಗಳೂರು ಟೈಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ನಸುಕಿನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ನಸುಕಿನ 3-4 ಗಂಟೆ ವೇಳೆಗೆ ಹಠಾತ್ತಾಗಿ ಫ್ಯಾಕ್ಟರಿಯ ಒಂದು ಭಾಗಕ್ಕೆ ಬೆಂಕಿ ಹತ್ತಿಕೊಂಡಿದ್ದು ಬಹಳಷ್ಟು ನಷ್ಟ ಉಂಟಾಗಿದೆ.
ಆಬಳಿಕ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎನ್ನುವುದು ತಿಳಿದುಬಂದಿಲ್ಲ. ಈ ಬಗ್ಗೆ ಮಾಲಕರಾದ ಅಲ್ಬುಕರ್ಕ್ ಸನ್ಸ್ ಕುಟುಂಬದ ಸದಸ್ಯರಲ್ಲಿ ಕೇಳಿದಾಗ, ನಷ್ಟದ ಬಗ್ಗೆ ಮತ್ತು ಹೇಗೆ ಬೆಂಕಿ ಉಂಟಾಗಿದೆಯೆಂದು ಇನ್ನೂ ಗೊತ್ತಾಗಿಲ್ಲ ಎಂದಿದ್ದಾರೆ. ಮಂಗಳೂರು ಟೈಲ್ ಫ್ಯಾಕ್ಟರಿಯನ್ನು 1868ರಲ್ಲಿ ಬ್ರಿಟಿಷರ ಆಡಳಿತ ಇದ್ದಾಗ ಅಲೆಕ್ಸ್ ಅಲ್ಬುಕರ್ಕ್ ಪೈಯವರು ಆರಂಭಿಸಿದ್ದರು. ಸದ್ಯ ಈ ಕುಟುಂಬದ ನಾಲ್ಕನೇ ತಲೆಮಾರಿನವರು ಸಂಸ್ಥೆಯನ್ನು ನಡೆಸುತ್ತಿದ್ದಾರೆ.



ದೇಶ- ವಿದೇಶಕ್ಕೆ ಟೈಲ್ಸ್ ಮತ್ತು ಇನ್ನಿತರ ಮಣ್ಣಿನ ಸಾಮಗ್ರಿಗಳನ್ನು ತಯಾರಿಸಿ ಪೂರೈಸುವುದರಲ್ಲಿ ಅಲ್ಬುಕರ್ಕ್ ಸನ್ಸ್ ಒಡೆತನದ ಈ ಫ್ಯಾಕ್ಟರಿ ಹೆಸರು ಪಡೆದಿದೆ. ಬೆಂಕಿ ಅವಘಡದಿಂದ ಫ್ಯಾಕ್ಟರಿಯ ಒಂದು ಭಾಗಕ್ಕೆ ಮಾತ್ರ ಹಾನಿಯಾಗಿದ್ದು ಉತ್ಪಾದನೆಗೇನೂ ತೊಂದರೆಯಾಗಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಈಗಲೂ ಮಂಗಳೂರು ಟೈಲ್ಸ್ ಸಂಸ್ಥೆಯ ಇಟ್ಟಿಗೆ, ಹಂಚುಗಳಿಗೆ ದೇಶಾದ್ಯಂತ ಬೇಡಿಕೆ ಇದೆ. ವಿಷಯ ತಿಳಿದು ಬೆಂಗಳೂರಿನಲ್ಲಿ ನೆಲೆಸಿದ್ದ ಅಲ್ಬುಕರ್ಕ್ ಸಂಸ್ಥೆಯವರು ಮಂಗಳೂರಿಗೆ ಬಂದಿದ್ದಾರೆ.
A fire broke out in the early hours of Tuesday at the historic Mangalore Tile Factory in Hoigebazar, known as India’s first tile factory with a 158-year legacy. The blaze reportedly started around 3–4 a.m., damaging a section of the factory and causing significant loss.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
11-09-26 10:14 am
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm