ಬ್ರೇಕಿಂಗ್ ನ್ಯೂಸ್
20-01-26 10:59 pm Mangalore Correspondent ಕರಾವಳಿ
ಮಂಗಳೂರು, ಜ.20 : ನಗರದ ಹೊಯ್ಗೆ ಬಜಾರ್ ನಲ್ಲಿರುವ 158 ವರ್ಷಗಳ ಇತಿಹಾಸವುಳ್ಳ, ದೇಶದ ಮೊದಲ ಟೈಲ್ ಫ್ಯಾಕ್ಟರಿಯೆಂದು ಹೆಸರಾಗಿರುವ ಮಂಗಳೂರು ಟೈಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ನಸುಕಿನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ನಸುಕಿನ 3-4 ಗಂಟೆ ವೇಳೆಗೆ ಹಠಾತ್ತಾಗಿ ಫ್ಯಾಕ್ಟರಿಯ ಒಂದು ಭಾಗಕ್ಕೆ ಬೆಂಕಿ ಹತ್ತಿಕೊಂಡಿದ್ದು ಬಹಳಷ್ಟು ನಷ್ಟ ಉಂಟಾಗಿದೆ.
ಆಬಳಿಕ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎನ್ನುವುದು ತಿಳಿದುಬಂದಿಲ್ಲ. ಈ ಬಗ್ಗೆ ಮಾಲಕರಾದ ಅಲ್ಬುಕರ್ಕ್ ಸನ್ಸ್ ಕುಟುಂಬದ ಸದಸ್ಯರಲ್ಲಿ ಕೇಳಿದಾಗ, ನಷ್ಟದ ಬಗ್ಗೆ ಮತ್ತು ಹೇಗೆ ಬೆಂಕಿ ಉಂಟಾಗಿದೆಯೆಂದು ಇನ್ನೂ ಗೊತ್ತಾಗಿಲ್ಲ ಎಂದಿದ್ದಾರೆ. ಮಂಗಳೂರು ಟೈಲ್ ಫ್ಯಾಕ್ಟರಿಯನ್ನು 1868ರಲ್ಲಿ ಬ್ರಿಟಿಷರ ಆಡಳಿತ ಇದ್ದಾಗ ಅಲೆಕ್ಸ್ ಅಲ್ಬುಕರ್ಕ್ ಪೈಯವರು ಆರಂಭಿಸಿದ್ದರು. ಸದ್ಯ ಈ ಕುಟುಂಬದ ನಾಲ್ಕನೇ ತಲೆಮಾರಿನವರು ಸಂಸ್ಥೆಯನ್ನು ನಡೆಸುತ್ತಿದ್ದಾರೆ.



ದೇಶ- ವಿದೇಶಕ್ಕೆ ಟೈಲ್ಸ್ ಮತ್ತು ಇನ್ನಿತರ ಮಣ್ಣಿನ ಸಾಮಗ್ರಿಗಳನ್ನು ತಯಾರಿಸಿ ಪೂರೈಸುವುದರಲ್ಲಿ ಅಲ್ಬುಕರ್ಕ್ ಸನ್ಸ್ ಒಡೆತನದ ಈ ಫ್ಯಾಕ್ಟರಿ ಹೆಸರು ಪಡೆದಿದೆ. ಬೆಂಕಿ ಅವಘಡದಿಂದ ಫ್ಯಾಕ್ಟರಿಯ ಒಂದು ಭಾಗಕ್ಕೆ ಮಾತ್ರ ಹಾನಿಯಾಗಿದ್ದು ಉತ್ಪಾದನೆಗೇನೂ ತೊಂದರೆಯಾಗಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಈಗಲೂ ಮಂಗಳೂರು ಟೈಲ್ಸ್ ಸಂಸ್ಥೆಯ ಇಟ್ಟಿಗೆ, ಹಂಚುಗಳಿಗೆ ದೇಶಾದ್ಯಂತ ಬೇಡಿಕೆ ಇದೆ. ವಿಷಯ ತಿಳಿದು ಬೆಂಗಳೂರಿನಲ್ಲಿ ನೆಲೆಸಿದ್ದ ಅಲ್ಬುಕರ್ಕ್ ಸಂಸ್ಥೆಯವರು ಮಂಗಳೂರಿಗೆ ಬಂದಿದ್ದಾರೆ.
A fire broke out in the early hours of Tuesday at the historic Mangalore Tile Factory in Hoigebazar, known as India’s first tile factory with a 158-year legacy. The blaze reportedly started around 3–4 a.m., damaging a section of the factory and causing significant loss.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm