ಬ್ರೇಕಿಂಗ್ ನ್ಯೂಸ್
20-01-26 10:59 pm Mangalore Correspondent ಕರಾವಳಿ
ಮಂಗಳೂರು, ಜ.20 : ನಗರದ ಹೊಯ್ಗೆ ಬಜಾರ್ ನಲ್ಲಿರುವ 158 ವರ್ಷಗಳ ಇತಿಹಾಸವುಳ್ಳ, ದೇಶದ ಮೊದಲ ಟೈಲ್ ಫ್ಯಾಕ್ಟರಿಯೆಂದು ಹೆಸರಾಗಿರುವ ಮಂಗಳೂರು ಟೈಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ನಸುಕಿನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ನಸುಕಿನ 3-4 ಗಂಟೆ ವೇಳೆಗೆ ಹಠಾತ್ತಾಗಿ ಫ್ಯಾಕ್ಟರಿಯ ಒಂದು ಭಾಗಕ್ಕೆ ಬೆಂಕಿ ಹತ್ತಿಕೊಂಡಿದ್ದು ಬಹಳಷ್ಟು ನಷ್ಟ ಉಂಟಾಗಿದೆ.
ಆಬಳಿಕ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎನ್ನುವುದು ತಿಳಿದುಬಂದಿಲ್ಲ. ಈ ಬಗ್ಗೆ ಮಾಲಕರಾದ ಅಲ್ಬುಕರ್ಕ್ ಸನ್ಸ್ ಕುಟುಂಬದ ಸದಸ್ಯರಲ್ಲಿ ಕೇಳಿದಾಗ, ನಷ್ಟದ ಬಗ್ಗೆ ಮತ್ತು ಹೇಗೆ ಬೆಂಕಿ ಉಂಟಾಗಿದೆಯೆಂದು ಇನ್ನೂ ಗೊತ್ತಾಗಿಲ್ಲ ಎಂದಿದ್ದಾರೆ. ಮಂಗಳೂರು ಟೈಲ್ ಫ್ಯಾಕ್ಟರಿಯನ್ನು 1868ರಲ್ಲಿ ಬ್ರಿಟಿಷರ ಆಡಳಿತ ಇದ್ದಾಗ ಅಲೆಕ್ಸ್ ಅಲ್ಬುಕರ್ಕ್ ಪೈಯವರು ಆರಂಭಿಸಿದ್ದರು. ಸದ್ಯ ಈ ಕುಟುಂಬದ ನಾಲ್ಕನೇ ತಲೆಮಾರಿನವರು ಸಂಸ್ಥೆಯನ್ನು ನಡೆಸುತ್ತಿದ್ದಾರೆ.



ದೇಶ- ವಿದೇಶಕ್ಕೆ ಟೈಲ್ಸ್ ಮತ್ತು ಇನ್ನಿತರ ಮಣ್ಣಿನ ಸಾಮಗ್ರಿಗಳನ್ನು ತಯಾರಿಸಿ ಪೂರೈಸುವುದರಲ್ಲಿ ಅಲ್ಬುಕರ್ಕ್ ಸನ್ಸ್ ಒಡೆತನದ ಈ ಫ್ಯಾಕ್ಟರಿ ಹೆಸರು ಪಡೆದಿದೆ. ಬೆಂಕಿ ಅವಘಡದಿಂದ ಫ್ಯಾಕ್ಟರಿಯ ಒಂದು ಭಾಗಕ್ಕೆ ಮಾತ್ರ ಹಾನಿಯಾಗಿದ್ದು ಉತ್ಪಾದನೆಗೇನೂ ತೊಂದರೆಯಾಗಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಈಗಲೂ ಮಂಗಳೂರು ಟೈಲ್ಸ್ ಸಂಸ್ಥೆಯ ಇಟ್ಟಿಗೆ, ಹಂಚುಗಳಿಗೆ ದೇಶಾದ್ಯಂತ ಬೇಡಿಕೆ ಇದೆ. ವಿಷಯ ತಿಳಿದು ಬೆಂಗಳೂರಿನಲ್ಲಿ ನೆಲೆಸಿದ್ದ ಅಲ್ಬುಕರ್ಕ್ ಸಂಸ್ಥೆಯವರು ಮಂಗಳೂರಿಗೆ ಬಂದಿದ್ದಾರೆ.
A fire broke out in the early hours of Tuesday at the historic Mangalore Tile Factory in Hoigebazar, known as India’s first tile factory with a 158-year legacy. The blaze reportedly started around 3–4 a.m., damaging a section of the factory and causing significant loss.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm