ಬ್ರೇಕಿಂಗ್ ನ್ಯೂಸ್
20-01-26 10:59 pm Mangalore Correspondent ಕರಾವಳಿ
ಮಂಗಳೂರು, ಜ.20 : ನಗರದ ಹೊಯ್ಗೆ ಬಜಾರ್ ನಲ್ಲಿರುವ 158 ವರ್ಷಗಳ ಇತಿಹಾಸವುಳ್ಳ, ದೇಶದ ಮೊದಲ ಟೈಲ್ ಫ್ಯಾಕ್ಟರಿಯೆಂದು ಹೆಸರಾಗಿರುವ ಮಂಗಳೂರು ಟೈಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ನಸುಕಿನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ನಸುಕಿನ 3-4 ಗಂಟೆ ವೇಳೆಗೆ ಹಠಾತ್ತಾಗಿ ಫ್ಯಾಕ್ಟರಿಯ ಒಂದು ಭಾಗಕ್ಕೆ ಬೆಂಕಿ ಹತ್ತಿಕೊಂಡಿದ್ದು ಬಹಳಷ್ಟು ನಷ್ಟ ಉಂಟಾಗಿದೆ.
ಆಬಳಿಕ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎನ್ನುವುದು ತಿಳಿದುಬಂದಿಲ್ಲ. ಈ ಬಗ್ಗೆ ಮಾಲಕರಾದ ಅಲ್ಬುಕರ್ಕ್ ಸನ್ಸ್ ಕುಟುಂಬದ ಸದಸ್ಯರಲ್ಲಿ ಕೇಳಿದಾಗ, ನಷ್ಟದ ಬಗ್ಗೆ ಮತ್ತು ಹೇಗೆ ಬೆಂಕಿ ಉಂಟಾಗಿದೆಯೆಂದು ಇನ್ನೂ ಗೊತ್ತಾಗಿಲ್ಲ ಎಂದಿದ್ದಾರೆ. ಮಂಗಳೂರು ಟೈಲ್ ಫ್ಯಾಕ್ಟರಿಯನ್ನು 1868ರಲ್ಲಿ ಬ್ರಿಟಿಷರ ಆಡಳಿತ ಇದ್ದಾಗ ಅಲೆಕ್ಸ್ ಅಲ್ಬುಕರ್ಕ್ ಪೈಯವರು ಆರಂಭಿಸಿದ್ದರು. ಸದ್ಯ ಈ ಕುಟುಂಬದ ನಾಲ್ಕನೇ ತಲೆಮಾರಿನವರು ಸಂಸ್ಥೆಯನ್ನು ನಡೆಸುತ್ತಿದ್ದಾರೆ.



ದೇಶ- ವಿದೇಶಕ್ಕೆ ಟೈಲ್ಸ್ ಮತ್ತು ಇನ್ನಿತರ ಮಣ್ಣಿನ ಸಾಮಗ್ರಿಗಳನ್ನು ತಯಾರಿಸಿ ಪೂರೈಸುವುದರಲ್ಲಿ ಅಲ್ಬುಕರ್ಕ್ ಸನ್ಸ್ ಒಡೆತನದ ಈ ಫ್ಯಾಕ್ಟರಿ ಹೆಸರು ಪಡೆದಿದೆ. ಬೆಂಕಿ ಅವಘಡದಿಂದ ಫ್ಯಾಕ್ಟರಿಯ ಒಂದು ಭಾಗಕ್ಕೆ ಮಾತ್ರ ಹಾನಿಯಾಗಿದ್ದು ಉತ್ಪಾದನೆಗೇನೂ ತೊಂದರೆಯಾಗಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಈಗಲೂ ಮಂಗಳೂರು ಟೈಲ್ಸ್ ಸಂಸ್ಥೆಯ ಇಟ್ಟಿಗೆ, ಹಂಚುಗಳಿಗೆ ದೇಶಾದ್ಯಂತ ಬೇಡಿಕೆ ಇದೆ. ವಿಷಯ ತಿಳಿದು ಬೆಂಗಳೂರಿನಲ್ಲಿ ನೆಲೆಸಿದ್ದ ಅಲ್ಬುಕರ್ಕ್ ಸಂಸ್ಥೆಯವರು ಮಂಗಳೂರಿಗೆ ಬಂದಿದ್ದಾರೆ.
A fire broke out in the early hours of Tuesday at the historic Mangalore Tile Factory in Hoigebazar, known as India’s first tile factory with a 158-year legacy. The blaze reportedly started around 3–4 a.m., damaging a section of the factory and causing significant loss.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 09:45 pm
HK News Staffer
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 10:04 pm
HK News Staffer
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm
ಮೊಮ್ಮಗನಿಂದಲೇ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದು ಅ...
17-08-26 09:39 pm
ಚಾಮರಾಜನಗರ ಶೂಟೌಟ್ ಪ್ರಕರಣ ; ರಾಜ್ಯದಲ್ಲಿ 13 ಲಕ್ಷ...
17-08-26 05:02 pm
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am