ಬ್ರೇಕಿಂಗ್ ನ್ಯೂಸ್
21-01-26 11:53 am Mangalore Correspondent ಕರಾವಳಿ
ಮಂಗಳೂರು, ಜ.21 : ಧರ್ಮಸ್ಥಳ ಗ್ರಾಮದ ಸಾಮೂಹಿಕ ಶವ ದಫನ ಪ್ರಕರಣದಲ್ಲಿ ತನಿಖೆ ನಡೆಸುತ್ತಿರವ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಕಾಡಿನಲ್ಲಿ ಪತ್ತೆಯಾದ ಏಳು ಅಸ್ಥಿಪಂಜರಗಳನ್ನು ವಿಧಿವಿಜ್ಞಾನ ಪ್ರಯೋಗಕ್ಕಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಸೌಜನ್ಯಾ ಮಾವ ವಿಠಲ ಗೌಡ ನೀಡಿದ ದೂರಿನಂತೆ 2025ರ ಸೆ.17, 18ರಂದು ಬಂಗ್ಲೆಗುಡ್ಡೆ ಕಾಡಿನಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಈ ಸಂದರ್ಭ ಪತ್ತೆಯಾದ ಅಸ್ಥಿಪಂಜರಗಳನ್ನು ಸುರಕ್ಷಿತವಾಗಿ ಇರಿಸಲಾಗಿತ್ತು. ಐದು ತಿಂಗಳ ಬಳಿಕ ಅಸ್ಥಿಪಂಜರದ ಪೂರ್ವಾಪರ ತಿಳಿಯಲು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ.
ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17ರಂದು ಐದು ಮತ್ತು ಸೆ.18ರಂದು ಎರಡು ಸೇರಿ ಒಟ್ಟು ಏಳು ಅಸ್ಥಿಪಂಜರಗಳನ್ನು ವಶಪಡಿಸಿಕೊಡಿದ್ದರು. ಜ.20ರಂದು ಬೆಳಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನಲ್ಲಿರುವ ಎಫ್ಎಸ್ಎಲ್ ಕಚೇರಿಗೆ ರವಾನೆ ಮಾಡಲಾಗಿದೆ.
ಬಂಗ್ಲೆಗುಡ್ಡೆ ಕಾಡಿನಲ್ಲಿ ನೂರಾರು ಅಸ್ಥಿಪಂಜರಗಳಿವೆ ಎಂದು ಸೌಜನ್ಯಾ ಮಾವ ವಿಠಲ ಗೌಡ ಹೇಳಿಕೆ ನೀಡಿದ್ದರು. ಎಸ್ಐಟಿ ಈ ಬಗ್ಗೆ ಯಾವುದೇ ಶೋಧ ನಡೆಸುತ್ತಿಲ್ಲ ಎಂದು ಪುರಂದರ ಗೌಡ ಎಂಬವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಉತ್ತರ ನೀಡುವಂತೆ ಸೂಚಿಸಿದ್ದು ಬಳಿಕ ಎಸ್ಐಟಿಗೆ ನೋಟಿಸ್ ಜಾರಿ ಮಾಡಿತ್ತು. ಇದರಂತೆ ಎಸ್ಐಟಿ ವಿಠಲ ಗೌಡ ಉಪಸ್ಥಿತಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಪ್ರಕರಣದ ಮೂಲ ದೂರುದಾರ, ಸಾಕ್ಷಿದಾರ ಚಿನ್ನಯ್ಯನ ಅನುಪಸ್ಥಿತಿಯಲ್ಲಿ ಈ ಶೋಧ ಕಾರ್ಯ ನಡೆದಿತ್ತು. ಈ ಸಂದರ್ಭ ನೆಲ ಅಗೆದು ಶೋಧ ನಡೆಸಿರಲಿಲ್ಲ. ನೆಲದ ಮೇಲ್ಮೈನಲ್ಲಿ ಇರಿಸಿದ್ದ ಮಾನವ ತಲೆಬುರುಡೆ, ಎಲುಬಿನ ಚೂರುಗಳನ್ನು ಸಂಗ್ರಹಿಸಲಾಗಿತ್ತು. ಚಿನ್ನಯ್ಯ ನೀಡಿದ ದೂರಿನಂತೆ, ಜು.28ರಿಂದ ಆ.13ರ ವರೆಗೆ ಸುಮಾರು 17 ಕಡೆ ಅಗೆದಿದ್ದ ಎಸ್ಐಟಿಗೆ ಚಿನ್ನಯ್ಯ ಹೇಳಿದಷ್ಟು ಪ್ರಮಾಣದ ಅಸ್ಥಿಪಂಜರ ಸಿಕ್ಕಿರಲಿಲ್ಲ.
The Special Investigation Team (SIT), probing the alleged mass burial case in Dharmasthala village, has sent seven human skeletons recovered from the Banglegudde forest to the Forensic Science Laboratory (FSL) in Bengaluru for detailed examination.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm