ಬ್ರೇಕಿಂಗ್ ನ್ಯೂಸ್
21-01-26 11:53 am Mangalore Correspondent ಕರಾವಳಿ
ಮಂಗಳೂರು, ಜ.21 : ಧರ್ಮಸ್ಥಳ ಗ್ರಾಮದ ಸಾಮೂಹಿಕ ಶವ ದಫನ ಪ್ರಕರಣದಲ್ಲಿ ತನಿಖೆ ನಡೆಸುತ್ತಿರವ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಕಾಡಿನಲ್ಲಿ ಪತ್ತೆಯಾದ ಏಳು ಅಸ್ಥಿಪಂಜರಗಳನ್ನು ವಿಧಿವಿಜ್ಞಾನ ಪ್ರಯೋಗಕ್ಕಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಸೌಜನ್ಯಾ ಮಾವ ವಿಠಲ ಗೌಡ ನೀಡಿದ ದೂರಿನಂತೆ 2025ರ ಸೆ.17, 18ರಂದು ಬಂಗ್ಲೆಗುಡ್ಡೆ ಕಾಡಿನಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಈ ಸಂದರ್ಭ ಪತ್ತೆಯಾದ ಅಸ್ಥಿಪಂಜರಗಳನ್ನು ಸುರಕ್ಷಿತವಾಗಿ ಇರಿಸಲಾಗಿತ್ತು. ಐದು ತಿಂಗಳ ಬಳಿಕ ಅಸ್ಥಿಪಂಜರದ ಪೂರ್ವಾಪರ ತಿಳಿಯಲು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ.
ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17ರಂದು ಐದು ಮತ್ತು ಸೆ.18ರಂದು ಎರಡು ಸೇರಿ ಒಟ್ಟು ಏಳು ಅಸ್ಥಿಪಂಜರಗಳನ್ನು ವಶಪಡಿಸಿಕೊಡಿದ್ದರು. ಜ.20ರಂದು ಬೆಳಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನಲ್ಲಿರುವ ಎಫ್ಎಸ್ಎಲ್ ಕಚೇರಿಗೆ ರವಾನೆ ಮಾಡಲಾಗಿದೆ.
ಬಂಗ್ಲೆಗುಡ್ಡೆ ಕಾಡಿನಲ್ಲಿ ನೂರಾರು ಅಸ್ಥಿಪಂಜರಗಳಿವೆ ಎಂದು ಸೌಜನ್ಯಾ ಮಾವ ವಿಠಲ ಗೌಡ ಹೇಳಿಕೆ ನೀಡಿದ್ದರು. ಎಸ್ಐಟಿ ಈ ಬಗ್ಗೆ ಯಾವುದೇ ಶೋಧ ನಡೆಸುತ್ತಿಲ್ಲ ಎಂದು ಪುರಂದರ ಗೌಡ ಎಂಬವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಉತ್ತರ ನೀಡುವಂತೆ ಸೂಚಿಸಿದ್ದು ಬಳಿಕ ಎಸ್ಐಟಿಗೆ ನೋಟಿಸ್ ಜಾರಿ ಮಾಡಿತ್ತು. ಇದರಂತೆ ಎಸ್ಐಟಿ ವಿಠಲ ಗೌಡ ಉಪಸ್ಥಿತಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಪ್ರಕರಣದ ಮೂಲ ದೂರುದಾರ, ಸಾಕ್ಷಿದಾರ ಚಿನ್ನಯ್ಯನ ಅನುಪಸ್ಥಿತಿಯಲ್ಲಿ ಈ ಶೋಧ ಕಾರ್ಯ ನಡೆದಿತ್ತು. ಈ ಸಂದರ್ಭ ನೆಲ ಅಗೆದು ಶೋಧ ನಡೆಸಿರಲಿಲ್ಲ. ನೆಲದ ಮೇಲ್ಮೈನಲ್ಲಿ ಇರಿಸಿದ್ದ ಮಾನವ ತಲೆಬುರುಡೆ, ಎಲುಬಿನ ಚೂರುಗಳನ್ನು ಸಂಗ್ರಹಿಸಲಾಗಿತ್ತು. ಚಿನ್ನಯ್ಯ ನೀಡಿದ ದೂರಿನಂತೆ, ಜು.28ರಿಂದ ಆ.13ರ ವರೆಗೆ ಸುಮಾರು 17 ಕಡೆ ಅಗೆದಿದ್ದ ಎಸ್ಐಟಿಗೆ ಚಿನ್ನಯ್ಯ ಹೇಳಿದಷ್ಟು ಪ್ರಮಾಣದ ಅಸ್ಥಿಪಂಜರ ಸಿಕ್ಕಿರಲಿಲ್ಲ.
The Special Investigation Team (SIT), probing the alleged mass burial case in Dharmasthala village, has sent seven human skeletons recovered from the Banglegudde forest to the Forensic Science Laboratory (FSL) in Bengaluru for detailed examination.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm