ಬ್ರೇಕಿಂಗ್ ನ್ಯೂಸ್
21-01-26 11:53 am Mangalore Correspondent ಕರಾವಳಿ
ಮಂಗಳೂರು, ಜ.21 : ಧರ್ಮಸ್ಥಳ ಗ್ರಾಮದ ಸಾಮೂಹಿಕ ಶವ ದಫನ ಪ್ರಕರಣದಲ್ಲಿ ತನಿಖೆ ನಡೆಸುತ್ತಿರವ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಕಾಡಿನಲ್ಲಿ ಪತ್ತೆಯಾದ ಏಳು ಅಸ್ಥಿಪಂಜರಗಳನ್ನು ವಿಧಿವಿಜ್ಞಾನ ಪ್ರಯೋಗಕ್ಕಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಸೌಜನ್ಯಾ ಮಾವ ವಿಠಲ ಗೌಡ ನೀಡಿದ ದೂರಿನಂತೆ 2025ರ ಸೆ.17, 18ರಂದು ಬಂಗ್ಲೆಗುಡ್ಡೆ ಕಾಡಿನಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಈ ಸಂದರ್ಭ ಪತ್ತೆಯಾದ ಅಸ್ಥಿಪಂಜರಗಳನ್ನು ಸುರಕ್ಷಿತವಾಗಿ ಇರಿಸಲಾಗಿತ್ತು. ಐದು ತಿಂಗಳ ಬಳಿಕ ಅಸ್ಥಿಪಂಜರದ ಪೂರ್ವಾಪರ ತಿಳಿಯಲು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ.
ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17ರಂದು ಐದು ಮತ್ತು ಸೆ.18ರಂದು ಎರಡು ಸೇರಿ ಒಟ್ಟು ಏಳು ಅಸ್ಥಿಪಂಜರಗಳನ್ನು ವಶಪಡಿಸಿಕೊಡಿದ್ದರು. ಜ.20ರಂದು ಬೆಳಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನಲ್ಲಿರುವ ಎಫ್ಎಸ್ಎಲ್ ಕಚೇರಿಗೆ ರವಾನೆ ಮಾಡಲಾಗಿದೆ.
ಬಂಗ್ಲೆಗುಡ್ಡೆ ಕಾಡಿನಲ್ಲಿ ನೂರಾರು ಅಸ್ಥಿಪಂಜರಗಳಿವೆ ಎಂದು ಸೌಜನ್ಯಾ ಮಾವ ವಿಠಲ ಗೌಡ ಹೇಳಿಕೆ ನೀಡಿದ್ದರು. ಎಸ್ಐಟಿ ಈ ಬಗ್ಗೆ ಯಾವುದೇ ಶೋಧ ನಡೆಸುತ್ತಿಲ್ಲ ಎಂದು ಪುರಂದರ ಗೌಡ ಎಂಬವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಉತ್ತರ ನೀಡುವಂತೆ ಸೂಚಿಸಿದ್ದು ಬಳಿಕ ಎಸ್ಐಟಿಗೆ ನೋಟಿಸ್ ಜಾರಿ ಮಾಡಿತ್ತು. ಇದರಂತೆ ಎಸ್ಐಟಿ ವಿಠಲ ಗೌಡ ಉಪಸ್ಥಿತಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಪ್ರಕರಣದ ಮೂಲ ದೂರುದಾರ, ಸಾಕ್ಷಿದಾರ ಚಿನ್ನಯ್ಯನ ಅನುಪಸ್ಥಿತಿಯಲ್ಲಿ ಈ ಶೋಧ ಕಾರ್ಯ ನಡೆದಿತ್ತು. ಈ ಸಂದರ್ಭ ನೆಲ ಅಗೆದು ಶೋಧ ನಡೆಸಿರಲಿಲ್ಲ. ನೆಲದ ಮೇಲ್ಮೈನಲ್ಲಿ ಇರಿಸಿದ್ದ ಮಾನವ ತಲೆಬುರುಡೆ, ಎಲುಬಿನ ಚೂರುಗಳನ್ನು ಸಂಗ್ರಹಿಸಲಾಗಿತ್ತು. ಚಿನ್ನಯ್ಯ ನೀಡಿದ ದೂರಿನಂತೆ, ಜು.28ರಿಂದ ಆ.13ರ ವರೆಗೆ ಸುಮಾರು 17 ಕಡೆ ಅಗೆದಿದ್ದ ಎಸ್ಐಟಿಗೆ ಚಿನ್ನಯ್ಯ ಹೇಳಿದಷ್ಟು ಪ್ರಮಾಣದ ಅಸ್ಥಿಪಂಜರ ಸಿಕ್ಕಿರಲಿಲ್ಲ.
The Special Investigation Team (SIT), probing the alleged mass burial case in Dharmasthala village, has sent seven human skeletons recovered from the Banglegudde forest to the Forensic Science Laboratory (FSL) in Bengaluru for detailed examination.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am