ಬ್ರೇಕಿಂಗ್ ನ್ಯೂಸ್
21-01-26 10:55 pm Mangalore Correspondent ಕರಾವಳಿ
ಪುತ್ತೂರು, ಜ.21 : ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ದ್ವೇಷ ಪೂರಿತ ಭಾಷಣ ಮಾಡಿದ್ದಾರೆಂದು ಮಾನವ ಬಂಧುತ್ವ ವೇದಿಕೆಯ ರಾಮಚಂದ್ರ ಕೆ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಜ.12ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ ಪ್ರಭಾಕರ ಭಟ್, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತಹ, ಕೋಮುದ್ವೇಷದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿರುತ್ತಾರೆ. ಸದ್ರಿ ಭಾಷಣವನ್ನು "VIKASANA TV" ಎಂಬ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಿರುತ್ತಾರೆ. ಸದ್ರಿ ಕಾರ್ಯಕ್ರಮದಲ್ಲಿ ಹಿಂದು - ಮುಸ್ಲಿಂ ಮಧ್ಯೆ ಕೋಮು ದ್ವೇಷ ಬಿತ್ತುವ ರೀತಿ ಮಾತನಾಡಿದ್ದಾರೆ.
ಅಲ್ಲದೆ, ಮುಸ್ಲಿಂ ಮತ್ತು ಕ್ರಿಸ್ತಿಯನ್ ಮತಾಂತರ, ದೇಶ ವಿಭಜನೆ ಬಗ್ಗೆ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ್ದಾರೆಂದು ಡಾ.ಕಲ್ಲಡ ಪ್ರಭಾಕರ ಭಟ್ ವಿರುದ್ದ, ಸದ್ರಿ ಭಾಷಣವನ್ನು ಪ್ರಸಾರ ಮಾಡಿದ "VIKASANA TV" (ವಿಕಸನ ಟಿವಿ)ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ದ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196, 299, 302, 353(2), 3(5) BNS ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಪುತ್ತೂರು ಠಾಣೆಯಲ್ಲಿ ಕೋಮು ದ್ವೇಷದ ಭಾಷಣ ನೆಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದರಲ್ಲಿ ಜಾಮೀನು ಸಿಗಲು ಎರಡು ತಿಂಗಳು ಬೇಕಾಗಿತ್ತು. ಕೊನೆಗೆ, ಜಾಮೀನು ನೀಡುವ ಸಂದರ್ಭದಲ್ಲಿ ಇಂತಹ ಭಾಷಣ ಮಾಡಬಾರದು, ಕೇಸು ದಾಖಲಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿತ್ತು.
Another FIR has been registered against RSS leader Dr. Kalladka Prabhakar Bhat for allegedly delivering a hate speech during a Vivekananda Jayanti programme held at Vivekananda College, Puttur, on January 12.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm