ಬ್ರೇಕಿಂಗ್ ನ್ಯೂಸ್
23-01-26 11:44 am Mangalore Correspondent ಕರಾವಳಿ
ಮಂಗಳೂರು, ಜ 23 : ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ ಮಂಗಳೂರಿನ ಜನರನ್ನು, ವಿಶೇಷವಾಗಿ ತುಳು ಭಾಷಿಕರನ್ನು ಸೋಶಿಯಲ್ ಮೀಡಿಯಾದಲ್ಲಿ ನಕ್ಕು ನಗಿಸಿದ್ದ ಫೇಮಸ್ ರೀಲ್ಸ್ ಸ್ಟಾರ್ ಆಶಾ ಪಂಡಿತ್ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸ್ವತಃ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಲಾಗಿದ್ದು, ನಿನ್ನೆ ರಾತ್ರಿ ಆಶಾ ಪಂಡಿತ್ ಅವರು ಹೃದಯಾಘಾತದಿಂದ ನಿಧನ ಹೊಂದಿದರು ಎಂದು ವರದಿಯಾಗಿದೆ. ನಿನ್ನೆ ತಡರಾತ್ರಿ ಆಶಾ ಪಂಡಿತ್ ಅವರಿಗೆ ವಾಂತಿ ಸಮಸ್ಯೆ ಉಂಟಾಗಿದ್ದು, ಮನೆಯ ಅಂಗಳದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಅದಾಗಲೇ ಹೃದಯಾಘಾತದಿಂದ ಕೊನೆಯುಸಿರೆಳಿದ್ದರು ಎಂದು ವೈದ್ಯರು ಘೋಷಿಸಿದರು.
ಆಶಾ ಪಂಡಿತ್ ಅವರ ನಿಧನದ ಸುದ್ದಿ ಅವರ ಅಭಿಮಾನಿಗಳಿಗೆ ಅಚ್ಚರಿಯನ್ನುಂಟು ಮಾಡಿದ್ದು, ಈ ಸುದ್ದಿ ನಿಜಕ್ಕೂ ನಂಬೋಕೆ ಸಾಧ್ಯವಿಲ್ಲ ಎಂದು ನೂರಾರು ಜನರು ಅವರ ಪೋಸ್ಟ್ನಲ್ಲಿ ಕಾಮೆಂಟ್ ಹಾಕುತ್ತಿದ್ದಾರೆ. ಪ್ರತಿನಿತ್ಯ ಬೈಗುಳದ ಪೋಸ್ಟ್ಗಳ ಮೂಲಕವೇ ಜನರನ್ನು ಮನರಂಜಿಸುತ್ತಿದ್ದ ಆಶಾ ಪಂಡಿತ್ ಅವರ ಪೋಸ್ಟ್ಗಳಿಗೆ ನಗುತ್ತಾ, ಬೈಯ್ಯುತ್ತಾ ಕಾಮೆಂಟ್ ಹಾಕುತ್ತಿದ್ದ ಜನರು ಇಂದು ಕಣ್ಣೀರಿನ ಕಾಮೆಂಟ್ಗಳನ್ನು ಹಾಕುತ್ತಿದ್ದಾರೆ.
ಕನ್ನಡ ಚಿತ್ರನಟಿ ಅಶ್ವಿತಿ ಶೆಟ್ಟಿ ಕೂಡ ಆಶಾ ಪಂಡಿತ್ ಅವರ ಪೋಸ್ಟ್ಗೆ ಕಾಮೆಂಟ್ ಹಾಕಿ ಕಂಬನಿ ಮಿಡಿದಿದ್ದಾರೆ, ಅಶ್ವಿತಿ ಶೆಟ್ಟಿ ಅವರು ತಮ್ಮ ಕಾಮೆಂಟ್ನಲ್ಲಿ ‘ನನಗೆ ಏನು ಹೇಳಬೇಕು ಅಂತಾನೇ ಗೊತ್ತಾಗ್ತಿಲ್ಲ, ನನಗೆ ಗೊತ್ತಿಲ್ಲದಂತೆ ನನ್ನ ಮುಖದಲ್ಲಿ ನೀವು ನಗು ತರಿಸಿದ್ದೀರಿ, ಈ ಸುದ್ದಿ ಕೇಳಿ ನನಗೆ ತುಂಬಾ ಬೇಸರವಾಯಿತು, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಪೋಸ್ಟ್ ಮಾಡಿದ್ದಾರೆ.
Popular Instagram reels creator Asha Pandit, fondly known as Mangaluru’s “Reels Queen,” passed away following a heart attack, leaving her followers in shock. Known for entertaining Tulu-language comedy videos, her sudden demise has triggered an outpouring of grief from fans and celebrities alike, with many expressing disbelief and sorrow on social media.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm