ಬ್ರೇಕಿಂಗ್ ನ್ಯೂಸ್
24-01-26 11:23 pm Mangaluru Staffer ಕರಾವಳಿ
ಮಂಗಳೂರು, ಜ.24: ಗಂಭೀರ ಪ್ರಕರಣಗಳಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಗದೇ ಇದ್ದಲ್ಲಿ ಅವರಿಗೆ ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ಈಗಾಗಲೇ ಸುಮಾರು 15 ರೌಡಿಗಳನ್ನು ಬಂಧಿಸಿದ್ದು ವಿವಿಧ ಪ್ರಕರಣಗಳಲ್ಲಿ ವಿಚಾರಣೆ ಆರಂಭಿಸಲಾಗಿದೆ. ಪೊಲೀಸರ ಕೈಗೆ ಸಿಗದೇ ಇರುವ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ಜಾಮೀನು ನೀಡಿದವರ ಕಂದಾಯ ದಾಖಲೆಗಳನ್ನು ನ್ಯಾಯಾಲಯದ ಆಸ್ತಿಯೆಂದು ಘೋಷಿಸಲಾಗುವುದು. ಈ ಬಗ್ಗೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದು 17 ಜಾಮೀನುದಾರರ ಹೆಸರಿನಲ್ಲಿರುವ ಆರ್ ಟಿಸಿಯನ್ನು ನ್ಯಾಯಾಲಯದ ಆಸ್ತಿಯೆಂದು ನಮೂದಿಸಲಾಗಿದೆ. 11 ಮಂದಿಗೆ 10 ಸಾವಿರದಿಂದ 2 ಲಕ್ಷ ರೂ. ವರೆಗೆ ದಂಡ ವಿಧಿಸಲಾಗಿದೆ. ಓರ್ವ ಆರೋಪಿಯ ಮನೆಯನ್ನು ನ್ಯಾಯಾಲಯದ ಮೂಲಕ ಹರಾಜು ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೋಮು ದ್ವೇಷದ ಕೊಲೆ, ಹತ್ಯೆ, ದರೋಡೆ, ಸುಲಿಗೆ, ಅತ್ಯಾಚಾರ ಹೀಗೆ ಗಂಭೀರ ಪ್ರಕರಣಗಳಲ್ಲಿ ಪಾಲ್ಗೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ರೌಡಿ ಶೀಟರ್ಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ, ಅವರಿಗೆ ಜಾಮೀನು ನೀಡಿದವರಿಗೂ ಬಿಸಿ ಮುಟ್ಟಿಸಲಾಗಿದೆ. ಹೀಗಾಗಿ ಅಪರಾಧ ಪ್ರಕರಣಗಳಲ್ಲಿ ಜಾಮೀನು ನೀಡಲು ಬರುವವರು ಜಾಗ್ರತೆ ವಹಿಸಬೇಕಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಹೇಳಿದ್ದಾರೆ
Mangaluru Police Commissioner Sudheer Reddy has warned that stringent action will be taken against accused persons involved in serious crimes who evade arrest. He said that the properties of such accused will be seized and legal action will also be initiated against those who stood as sureties for them. Speaking to the media, the Police Commissioner said that around 15 rowdy-sheeters have already been arrested, and investigations are underway in various criminal cases. Steps have been initiated to attach the properties of accused persons who are absconding and failing to appear before the court.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm