ಬ್ರೇಕಿಂಗ್ ನ್ಯೂಸ್
27-01-26 08:58 pm Mangalore Correspondent ಕರಾವಳಿ
ಉಳ್ಳಾಲ, ಜ.27 : ಕುತ್ತಾರಿನ ದಿವ್ಯಜ್ಯೋತಿ ಕ್ರಿಕೆಟರ್ಸ್ ವತಿಯಿಂದ ಇದೇ ಫೆ.1 ರಂದು ಸಂಜೆ 5 ಗಂಟೆಗೆ ಪಂಡಿತ್ ಹೌಸ್ ನಿಂದ ತಲಪಾಡಿಯ ದೇವಿಪುರ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ "ನಮೆಲ್ಲರ ನಡಿಗೆ ಶ್ರೀ ಕ್ಷೇತ್ರ ತಲಪಾಡಿ ದೇವಿಪುರದ ಕಡೆಗೆ" ಬೃಹತ್ ಪಾದಯಾತ್ರೆ ನಡೆಯಲಿದ್ದು, ಲೋಕ ಕಲ್ಯಾಣಾರ್ಥ ನಡೆಯಲಿರುವ ಪಾದಯಾತ್ರೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಜೆಪಿ ಮಂಗಳೂರು ಮಂಡಲದ ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಿವ್ಯಜ್ಯೋತಿ ಕ್ರಿಕೆಟರ್ಸ್ ಹಾಗೂ ಅದರ ಅಂಗಸಂಸ್ಥೆಯಾದ ದಿವ್ಯ ಜ್ಯೋತಿ ಸೇವಾ ಬಳಗವು ಉಳ್ಳಾಲ ಭಾಗದಲ್ಲಿ ಕಳೆದ ನಲ್ವತ್ತೈದು ವರುಷಗಳಿಂದ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳನ್ನು ನಡೆಸಿ ಬಹಳ ಜನಮೆಚ್ಚುಗೆ ಪಡೆದಿರುವ ಸಂಸ್ಥೆಯಾಗಿದೆ. ದಿವ್ಯಜ್ಯೋತಿ ಸಂಸ್ಥೆ ವತಿಯಿಂದ ಮೂರು ವರ್ಷದ ಹಿಂದೆ ಹಮ್ಮಿಕೊಂಡಿದ್ದ "ನಮ್ಮ ನಡೆ ಪೊಳಲಿ ರಾಜರಾಜೇಶ್ವರಿ ಅಮ್ಮನ ಕಡೆಗೆ" ಬೃಹತ್ ಪಾದಯಾತ್ರೆಗೆ ಅಭೂತಪೂರ್ವ ಯಶಸ್ಸು ದೊರೆತಿತ್ತು. ಆ ಯಶಸ್ಸಿನ ಪ್ರೇರಣೆಯಿಂದಲೇ ತಲಪಾಡಿ ದೇವಿಪುರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಮಧ್ಯಾಹ್ನ 3 ಗಂಟೆಗೆ ಪಂಡಿತ್ ಹೌಸ್ ನ ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ಕಟ್ಟೆಯ ಬಳಿ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಗಳು ಉದ್ಘಾಟಿಸಲಿದ್ದಾರೆ. ಬಿಜೆಪಿ ಮಂಗಳೂರು ಮಂಡಲದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಅಧ್ಯಕ್ಷತೆ ವಹಿಸಲಿದ್ದಾರೆ. ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಗಣೇಶ್ ಭಟ್ ಪಂಜಾಳ, ವಿಶ್ವ ಹಿಂದು ಪರಿಷತ್ ಕೇಂದ್ರೀಯ ಕಾರ್ಯಕಾರಿಣಿ ಸದಸ್ಯರಾದ ಡಾ.ಎಂ.ಬಿ.ಪುರಾಣಿಕ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ದಿವ್ಯಜ್ಯೋತಿ ಕ್ರಿಕೆಟರ್ಸ್ ನಿಂದ ಮಾಸ್ಟರ್ ಅಯಾನ್ಶ್ ಸ್ಮರಣಾರ್ಥವಾಗಿ ಉಚಿತ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆಗೊಳ್ಳಲಿದೆ. ಸಂಜೆ 5 ಗಂಟೆಗೆ ತಲಪಾಡಿ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ಹೊರಡಲಿದೆ. ಪಾದಯಾತ್ರೆ ಮುಗಿದ ಬಳಿಕ ಭಕ್ತಾದಿಗಳು ತಲಪಾಡಿಯಿಂದ ಹಿಂತಿರುಗಲು ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದು ಚಂದ್ರಹಾಸ್ ಮಾಹಿತಿ ನೀಡಿದರು.
ಒಂದೂವರೆ ವರ್ಷದ ಹಿಂದೆ ಬಜಪೆಯ ಕೆಂಜಾರುವಿನ ಅಯಾನ್ಶ್ ಎಂಬ ಅಪ್ರಾಪ್ತ ಬಾಲಕನಿಗೆ ಮಾರಕ ಕ್ಯಾನ್ಸರ್ ರೋಗ ಭಾದಿಸಿತ್ತು. ಅಯಾನ್ಶ್ ಚಿಕಿತ್ಸೆಗಾಗಿ ದಿವ್ಯಜ್ಯೋತಿ ಕ್ರಿಕೆಟರ್ಸ್ ಸದಸ್ಯರು ಪಿಲಾರಿನ ಪಂಜಂದಾಯ ದೈವದ ಜಾತ್ರೆಯಲ್ಲಿ ದಾನಿಗಳಿಂದ ದೇಣಿಗೆ ಸಂಗ್ರಹಿಸಿದ್ದರು. ದುಬಾರಿ ಚಿಕಿತ್ಸೆ ನೀಡಿದರೂ ಅಯಾನ್ಶ್ ಬದುಕಿಸಲು ಸಾಧ್ಯವಾಗಿರಲಿಲ್ಲ. ಚಿಕಿತ್ಸೆಗೆಂದು ದಾನಿಗಳು ನೀಡಿದ ದೇಣಿಗೆಯಲ್ಲಿ ಉಳಿದ ಎಂಟು ಲಕ್ಷ ರೂಪಾಯಿಗಳನ್ನ ಪೋಷಕರು ದಿವ್ಯಜ್ಯೋತಿ ಸಂಸ್ಥೆಗೆ ನೀಡಿದ್ದು, ಆ ಹಣದಿಂದ ಅಯಾನ್ಶ್ ಸ್ಮರಣಾರ್ಥ ಸಮಾಜಕ್ಕೆ ಉಚಿತ ಆಂಬುಲೆನ್ಸ್ ಸೇವೆ ಒದಗಿಸುತ್ತಿದ್ದೇವೆ. ಮೃತ ಅಯಾನ್ಶ್ ತಂದೆ ನಿತ್ಯಾನಂದ ಶೆಟ್ಟಿ ಅವರೇ ಆಂಬ್ಯುಲೆನ್ಸನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ದಿವ್ಯಜ್ಯೋತಿ ಕ್ರಿಕೆಟರ್ಸ್ ಅಧ್ಯಕ್ಷ ಯತೀಶ್ ಶೆಟ್ಟಿ ಹೇಳಿದರು.
ಸಂಸ್ಥೆಯ ಗೌರವಾಧ್ಯಕ್ಷ ಅಶೋಕ್ ಅಮೀನ್, ಉಪಾಧ್ಯಕ್ಷ ಸತೀಶ್ ಪೂಜಾರಿ, ಕಾರ್ಯದರ್ಶಿ ರಂಗನಾಥ್, ಸದಸ್ಯರಾದ ಲಕ್ಷ್ಮಣ್ ಪೂಜಾರಿ, ದಿನೇಶ್ ಪೂಜಾರಿ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Divyajyothi Cricketers will organise a grand foot march titled “Our Walk Towards Talapady Devipura” on February 1, starting at 5 pm from Pandit House to the Devipura Sri Durga Parameshwari Temple at Talapady. The march is being held for public welfare and devotees are urged to participate in large numbers.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am