ಬ್ರೇಕಿಂಗ್ ನ್ಯೂಸ್
31-12-20 08:07 pm Mangaluru Correspondent ಕರಾವಳಿ
Photo credits : Facebook
ಮಂಗಳೂರು, ಡಿ.31: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಅವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ. ವಿಕಾಶ್ ಕುಮಾರ್ ಅವರನ್ನು ಕೆಎಸ್ ಆರ್ ಪಿ ಡಿಐಜಿ ಆಗಿ ವರ್ಗ ಮಾಡಿದ್ದು ನೂತನ್ ಪೊಲೀಸ್ ಕಮಿಷನರ್ ಆಗಿ ಎನ್. ಶಶಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಶಶಿಕುಮಾರ್ ಬೆಂಗಳೂರು ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದರು.
ಕಳೆದ ಜೂನ್ 29ರಂದು ವಿಕಾಶ್ ಕುಮಾರ್ ಮಂಗಳೂರು ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಕೇವಲ ಆರು ತಿಂಗಳಲ್ಲಿ ಕಮಿಷನರ್ ಹುದ್ದೆಯಿಂದ ತೆರವು ಮಾಡಿದ್ದು ಸಂಶಯಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಕಮಿಷನರ್ ಆಗಿದ್ದವರನ್ನು ಒಂದು ವರ್ಷಗಳ ಕಾಲ ವರ್ಗ ಮಾಡುವುದಿಲ್ಲ.

ಇದಕ್ಕೂ ಮುನ್ನ ಪಿ.ಎಸ್.ಹರ್ಷ ಮಂಗಳೂರು ಕಮಿಷನರ್ ಆಗಿದ್ದರು. ಕಳೆದ ಬಾರಿ ಗೋಲಿಬಾರ್ ಸಂದರ್ಭ ಹರ್ಷ ವಿರುದ್ಧ ಆರೋಪ ಕೇಳಿಬಂದರೂ, ಅವರನ್ನು ಉಳಿಸಿಕೊಳ್ಳಲಾಗಿತ್ತು. ಮೃದು ಸ್ವಭಾವದವರಾಗಿದ್ದ ಹರ್ಷ ಅವರ ಬಗ್ಗೆ ಮಂಗಳೂರಿನ ಪೊಲೀಸರಲ್ಲಿ ಉತ್ತಮ ಅಭಿಪ್ರಾಯವೇ ಇತ್ತು.
ಆದರೆ, ವಿಕಾಶ್ ಕುಮಾರ್ ಕಮಿಷನರ್ ಆಗಿ ಬಂದ ಬಳಿಕ ಸಹೋದ್ಯೋಗಿಗಳಲ್ಲಿಯೇ ಉತ್ತಮ ಅಭಿಪ್ರಾಯ ಇರಲಿಲ್ಲ. ಕೆಲವು ವಿಚಾರಗಳಲ್ಲಿ ಏಕಪಕ್ಷೀಯ ನಡೆ ತೋರುತ್ತಿದ್ದರೆಂದು ಆರೋಪಗಳಿದ್ದವು. ಹೊಯ್ಗೆ ಮಾಫಿಯಾ ದಲ್ಲಾಳಿಗಳು ಕಮಿಷನರ್ ಕಚೇರಿಗೇ ಬರುತ್ತಿದ್ದರೆಂಬ ಆರೋಪಗಳೂ ಇದ್ದವು. ಅಲ್ಲದೆ, ಯಾವುದೇ ಮಹತ್ವದ ಘಟನೆಗಳಾದ ಸಂದರ್ಭದಲ್ಲೂ ಕಮಿಷನರ್ ಸ್ಥಳಕ್ಕೆ ಬಂದು ಇತರೇ ಪೊಲೀಸರಿಗೆ ಮೋಟಿವೇಶನ್ ಕೊಡುವ ಕೆಲಸ ಮಾಡುತ್ತಿರಲಿಲ್ಲ. ಇದೇ ಕಾರಣಕ್ಕೋ ಏನೋ ಕೇವಲ ಆರೇ ತಿಂಗಳಲ್ಲಿ ಮಂಗಳೂರು ಕಮಿಷನರ್ ಮಹತ್ವದ ಹುದ್ದೆಯಿಂದ ತೆರವು ಮಾಡಲಾಗಿದ್ದು ಯಾವುದೇ ಮಹತ್ವ ಇರದ ಕೆಎಸ್ ಆರ್ ಪಿ ಡಿಐಜಿ ಆಗಿ ವರ್ಗ ಮಾಡಲಾಗಿದೆ. ಈ ಹುದ್ದೆಯನ್ನು ಡಿಮೋಶನ್ ಎಂದೇ ಪರಿಗಣಿಸಲಾಗುತ್ತದೆ.
ಇದೇ ವೇಳೆ, ಮಂಗಳೂರಿನಲ್ಲಿ ಹೆಚ್ಚುವರಿಯಾಗಿ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿಯಾಗಿ ಕರ್ತವ್ಯದಲ್ಲಿದ್ದ ಐಪಿಎಸ್ ಅಧಿಕಾರಿ ರಂಜಿತ್ ಕುಮಾರ್ ಬಂದಾರು ಅವರನ್ನು ಭಟ್ಕಳ ಉಪ ವಿಭಾಗದ ಎಸ್ಪಿ ಆಗಿ ಪ್ರಮೋಟ್ ಮಾಡಲಾಗಿದೆ.
Mangaluru city commissioner Vikash Kumar Vikash has been transferred with immediate effect. Shashi Kumar appointed as New Police Commissioner of Mangalore City. Shashi Kumar who was earlier the superintendent of police, internal security division will now assume th
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm