ಬ್ರೇಕಿಂಗ್ ನ್ಯೂಸ್
29-01-26 10:38 pm Mangalore Correspondent ಕರಾವಳಿ
ಮಂಗಳೂರು, ಜ.29 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಧ್ವನಿ ಎತ್ತಿದರು.
ಸದನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹೊಸ ನಿಯಮ ಬಂದರೂ ಮಂಗಳೂರಿನಲ್ಲೇ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲು ನೋಡುತ್ತಾರೆ. ಈ ಹಿಂದೆ ನಗರದಲ್ಲಿ ಜಿಪಿಎಸ್ ಆಧಾರದಲ್ಲಿ ಇ-ಖಾತಾ ಆರಂಭಿಸಲಾಗಿದ್ದು ಲೊಕೇಶನ್ ಸೆರೆಹಿಡಿದು ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತಿತ್ತು. ಈ ಸರ್ಕಾರ ಯಾವಾಗ ಹೊಸ ತಂತ್ರಾಂಶವನ್ನು ಜಾರಿಗೊಳಿಸಿತೋ ಅಂದಿನಿಂದ ಎಲ್ಲವೂ ಅಸ್ತವ್ಯಸ್ತಗೊಂಡು ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಳೆದ ಎರಡು ತಿಂಗಳಿನಲ್ಲಿ ಆಗಿರುವ ಇ-ಖಾತಾಗಳ ಸಂಖ್ಯೆ ನೋಡಿದರೆ ಪರಿಸ್ಥಿತಿ ಅರ್ಥವಾಗುತ್ತದೆ. ಆದರೆ ಸಚಿವರು ಮಾತ್ರ, ಸರ್ವರ್ ಉನ್ನತೀಕರಿಸಲಾಗಿದ್ದು ಯಾವುದೇ ಸಮಸ್ಯೆಯಿಲ್ಲವೆಂದು ಉತ್ತರಿಸಿರುವುದು ದುರಂತವೆಂದರು.
ಅಲ್ಲದೇ ನಗರದಲ್ಲಿ ಪಿಪಿಪಿ ಮಾಡಲ್ ನಲ್ಲಿ ಅಳವಡಿಸಲಾಗಿರುವ ಬೀದಿ ದೀಪಗಳ ಬಗ್ಗೆ ನಿರ್ಲಕ್ಷ್ಯ ತೋರಲಾಗಿದೆ. ಹಳೆಯ ದೀಪಗಳು ದುರಸ್ತಿಯಾಗುತ್ತಿಲ್ಲ, ಹೊಸ ದೀಪಗಳು ಅಳವಡಿಸುತ್ತಿಲ್ಲ. ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಬಳಿ ಒಳಚರಂಡಿ ಕಾಮಗಾರಿ ಅಸ್ತವ್ಯಸ್ತಗೊಂಡಿರುವ ಬಗ್ಗೆ ಸ್ಥಳೀಯ ಮಹಿಳೆಯರು ದೂರು ನೀಡುತ್ತಿದ್ದಾರೆ. ಅದು ಸಚಿವರ ಸಹಿತ ಸ್ಪೀಕರ್ ಅವರ ಗಮನಕ್ಕೂ ಬಂದಿದೆ. ನಗರದ ಪ್ರಮುಖ ಭಾಗದಲ್ಲಿ ಟ್ರಾಫಿಕ್ ಸಮಸ್ಯೆಯಿಂದಾಗಿ ಜಲಸಿರಿ ಕಾಮಗಾರಿಗೆ ವೇಗ ಸಿಗುತ್ತಿಲ್ಲ. ಇಂತಹ ಮೊದಲಾದ ಸಮಸ್ಯೆಗಳ ಬಗ್ಗೆ ಕೂಡಲೇ ಸರ್ಕಾರ ಗಮನ ಹರಿಸಬೇಕು ಎಂದರು.
MLA Vedavyas Kamath highlighted serious e-Khata issues in Mangaluru City Corporation limits, along with damaged roads, faulty streetlights, drainage problems and delayed projects, urging the state government to take immediate corrective action.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm