ಬ್ರೇಕಿಂಗ್ ನ್ಯೂಸ್
29-01-26 10:38 pm Mangalore Correspondent ಕರಾವಳಿ
ಮಂಗಳೂರು, ಜ.29 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಧ್ವನಿ ಎತ್ತಿದರು.
ಸದನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹೊಸ ನಿಯಮ ಬಂದರೂ ಮಂಗಳೂರಿನಲ್ಲೇ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲು ನೋಡುತ್ತಾರೆ. ಈ ಹಿಂದೆ ನಗರದಲ್ಲಿ ಜಿಪಿಎಸ್ ಆಧಾರದಲ್ಲಿ ಇ-ಖಾತಾ ಆರಂಭಿಸಲಾಗಿದ್ದು ಲೊಕೇಶನ್ ಸೆರೆಹಿಡಿದು ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತಿತ್ತು. ಈ ಸರ್ಕಾರ ಯಾವಾಗ ಹೊಸ ತಂತ್ರಾಂಶವನ್ನು ಜಾರಿಗೊಳಿಸಿತೋ ಅಂದಿನಿಂದ ಎಲ್ಲವೂ ಅಸ್ತವ್ಯಸ್ತಗೊಂಡು ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಳೆದ ಎರಡು ತಿಂಗಳಿನಲ್ಲಿ ಆಗಿರುವ ಇ-ಖಾತಾಗಳ ಸಂಖ್ಯೆ ನೋಡಿದರೆ ಪರಿಸ್ಥಿತಿ ಅರ್ಥವಾಗುತ್ತದೆ. ಆದರೆ ಸಚಿವರು ಮಾತ್ರ, ಸರ್ವರ್ ಉನ್ನತೀಕರಿಸಲಾಗಿದ್ದು ಯಾವುದೇ ಸಮಸ್ಯೆಯಿಲ್ಲವೆಂದು ಉತ್ತರಿಸಿರುವುದು ದುರಂತವೆಂದರು.
ಅಲ್ಲದೇ ನಗರದಲ್ಲಿ ಪಿಪಿಪಿ ಮಾಡಲ್ ನಲ್ಲಿ ಅಳವಡಿಸಲಾಗಿರುವ ಬೀದಿ ದೀಪಗಳ ಬಗ್ಗೆ ನಿರ್ಲಕ್ಷ್ಯ ತೋರಲಾಗಿದೆ. ಹಳೆಯ ದೀಪಗಳು ದುರಸ್ತಿಯಾಗುತ್ತಿಲ್ಲ, ಹೊಸ ದೀಪಗಳು ಅಳವಡಿಸುತ್ತಿಲ್ಲ. ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಬಳಿ ಒಳಚರಂಡಿ ಕಾಮಗಾರಿ ಅಸ್ತವ್ಯಸ್ತಗೊಂಡಿರುವ ಬಗ್ಗೆ ಸ್ಥಳೀಯ ಮಹಿಳೆಯರು ದೂರು ನೀಡುತ್ತಿದ್ದಾರೆ. ಅದು ಸಚಿವರ ಸಹಿತ ಸ್ಪೀಕರ್ ಅವರ ಗಮನಕ್ಕೂ ಬಂದಿದೆ. ನಗರದ ಪ್ರಮುಖ ಭಾಗದಲ್ಲಿ ಟ್ರಾಫಿಕ್ ಸಮಸ್ಯೆಯಿಂದಾಗಿ ಜಲಸಿರಿ ಕಾಮಗಾರಿಗೆ ವೇಗ ಸಿಗುತ್ತಿಲ್ಲ. ಇಂತಹ ಮೊದಲಾದ ಸಮಸ್ಯೆಗಳ ಬಗ್ಗೆ ಕೂಡಲೇ ಸರ್ಕಾರ ಗಮನ ಹರಿಸಬೇಕು ಎಂದರು.
MLA Vedavyas Kamath highlighted serious e-Khata issues in Mangaluru City Corporation limits, along with damaged roads, faulty streetlights, drainage problems and delayed projects, urging the state government to take immediate corrective action.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm