ಬ್ರೇಕಿಂಗ್ ನ್ಯೂಸ್
03-02-26 04:38 pm Mangalore Correspondent ಕರಾವಳಿ
ಮಂಗಳೂರು, ಫೆ.3 : ಮಂಗಳೂರು ನಗರ ಸಶಸ್ತ್ರ ದಳದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಹಾವೇರಿ ಮೂಲದ ಮಾರುತಿ ಲಮಾಣಿ(36) ಅವರು ಮೆದುಳಿನ ರಕ್ತಸ್ರಾವಕ್ಕೀಡಾಗಿ ಸಾವನ್ನಪ್ಪಿದ್ದಾರೆ.
ಹೈವೇ ಪೆಟ್ರೋಲಿಂಗ್ ಮಾಡುವ ಕಾರಿನಲ್ಲಿ ಡ್ರೈವರ್ ಆಗಿ ಕರ್ತವ್ಯದಲ್ಲಿದ್ದ ಮಾರುತಿ ಲಮಾಣಿ ಭಾನುವಾರ ಬೆಳಗ್ಗೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದರು. ಇವರ ಪತ್ನಿ ಕದ್ರಿ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿದ್ದು ಕರ್ತವ್ಯಕ್ಕೆ ತೆರಳಿದ್ದರು. ಮನೆಗೆ ತೆರಳಿ ಮಲಗಿದ್ದಾಗ ಮಾರುತಿ ಅಸ್ವಸ್ಥರಾಗಿದ್ದು ಬಳಿಕ ಸ್ಥಳೀಯರು ಸೇರಿ ಎಜೆ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಪರೀಕ್ಷಿಸಿ ಮೆದುಳಿನಲ್ಲಿ ರಕ್ತಸ್ರಾವ ಆಗಿದ್ದು ಶಸ್ತ್ರಚಿಕಿತ್ಸೆ ಸಾಧ್ಯವಿಲ್ಲ ಎಂದಿದ್ದರು. ಎರಡು ದಿನ ಆಸ್ಪತ್ರೆಯಲ್ಲಿದ್ದ ಅವರು ಇಂದು ಬೆಳಗ್ಗೆ ಅಸುನೀಗಿದ್ದಾರೆ.
ಮಾರುತಿ ಸಿಎಆರ್ ಯುನಿಟ್ ನಲ್ಲಿ 9 ವರ್ಷಗಳಿಂದ ಕೆಲಸ ಮಾಡುತ್ತಿದ್ದು ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದಿದ್ದರು. ಪ್ರತಿ ವರ್ಷ ಪೊಲೀಸ್ ಇಲಾಖೆಯಲ್ಲಿ ಡಿಸೆಂಬರ್ ವೇಳೆಗೆ ಮೆಡಿಕಲ್ ಚೆಕಪ್ ನಡೆಯುತ್ತದೆ. ಮಾರುತಿ ಬಿಪಿಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಡಿಸೆಂಬರ್ ಚೆಕಪ್ ವೇಳೆಗೆ ಬಿಪಿ ನಾರ್ಮಲ್ ಕಂಡುಬಂದಿದ್ದರಿಂದ ಮಾತ್ರೆ ನಿಲ್ಲಿಸಿದ್ದರು ಎನ್ನಲಾಗಿದೆ. ಅವರಿಗೆ ಬೇರೆ ಯಾವುದೇ ತೊಂದರೆ ಇರಲಿಲ್ಲ. ಮದುವೆಯಾಗಿ ಐದು ವರ್ಷವಾಗಿದ್ದು ನಾಲ್ಕು ಮತ್ತು ಒಂದುವರೆ ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
Maruti Lamani (36), a Head Constable in Mangaluru City Armed Reserve (CAR), passed away due to a brain hemorrhage. He reportedly fell ill at home after completing duty and was admitted to AJ Hospital, where doctors said surgery was not possible. He had been serving in the CAR unit for nine years and is survived by his wife, also a constable, and two young daughters.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm