ಬ್ರೇಕಿಂಗ್ ನ್ಯೂಸ್
04-02-26 09:34 pm Mangalore Correspondent ಕರಾವಳಿ
ಮಂಗಳೂರು, ಫೆ.4: ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಗಿ ನೀಡುವ ತಂತ್ರಾಂಶವು ಸ್ಥಗಿತಗೊಂಡ ಪರಿಣಾಮ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದ ಬಗ್ಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಮನವಿಗೆ ಸ್ಪಂದಿಸಿದ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯು ಸಮಸ್ಯೆಯನ್ನು ಬಗೆಹರಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರಕಾರ ಏಕಾಏಕಿ ನಿರ್ಮಾಣ- 2 ತಂತ್ರಾಂಶವನ್ನು ಸ್ಥಗಿತಗೊಳಿಸಿ ಯುನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಯುಎಲ್ಎಂಎಸ್) ಅನ್ನು ಜಾರಿಗೆ ತಂದಿದ್ದೇ ಸಮಸ್ಯೆಗೆ ಕಾರಣವಾಗಿದ್ದು, ಹಳೆಯ ನಿರ್ಮಾಣ- 2 ತಂತ್ರಾಂಶ ಸಹಿತ ಹೊಸ ಯುಎಲ್ಎಂಎಸ್ ತಂತ್ರಾಂಶವೂ ಇಲ್ಲವಾಗಿ ಜನರಿಗೆ ಕಟ್ಟಡ ಪರವಾನಗಿ ಸಿಗದೇ ಪರದಾಡುವಂತಾಗಿತ್ತು. ಇದರಿಂದಾಗಿ ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಸೇರಿದಂತೆ ಎಲ್ಲಾ ರೀತಿಯ ಕಟ್ಟಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದ ಸಾವಿರಾರು ಮಂದಿ ತಿಂಗಳುಗಟ್ಟಲೆ ಕಾಯುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ, ಕಟ್ಟಡ ಗುತ್ತಿಗೆದಾರರು, ಎಂಜಿನಿಯರ್ ಗಳು, ಕೂಲಿ ಕಾರ್ಮಿಕರಿಗೂ ಬಹಳಷ್ಟು ಸಮಸ್ಯೆಯಾಗಿತ್ತು ಎಂದು ಶಾಸಕ ಕಾಮತ್ ಅವರು ನಗರಾಭಿವೃದ್ಧಿ ಕಾರ್ಯದರ್ಶಿ ಮತ್ತು ಪೌರಾಡಳಿತ ಇಲಾಖೆಯ ನಿರ್ದೇಶಕರ ಗಮನಕ್ಕೆ ತಂದಿದ್ದರು.
ಇದೀಗ ಲ್ಯಾಂಡ್ ಅಂಡ್ ಬಿಲ್ಡಿಂಗ್ ಪ್ಲಾನ್ ಎಪ್ರೂವಲ್ ಸಿಸ್ಟಮ್ (ಎಲ್ ಬಿಪಿಎಎಸ್) - ನಿರ್ಮಾಣ - 2 ತಂತ್ರಾಂಶವನ್ನು ಅಡಿಟ್ ಪೂರ್ಣಗೊಳಿಸಿ ಮರು ಜಾರಿಗೆ ತರಲಾಗಿದ್ದು ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸಿಕೊಳ್ಳುವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರಾಡಳಿತ ಇಲಾಖೆ ಆದೇಶ ಮಾಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಶಾಸಕರು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದ್ದು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಅಲ್ಲದೇ ನೂತನ ತಂತ್ರಾಂಶದಲ್ಲಿ ಡಿಪ್ಲೋಮಾ ಸಿವಿಲ್ ಎಂಜಿನಿಯರ್ಗಳನ್ನು ಸೂಪರ್ವೈಸರ್ ಎಂದು ಉಲ್ಲೇಖಿಸಿರುವುದರಿಂದ ಅನುಭವಿ ವೃತ್ತಿಪರ ಎಂಜಿನಿಯರ್ಗಳ ಸಹಿತ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆ ಪದದ ಬದಲು ಸಿವಿಲ್ ಎಂಜಿನಿಯರ್ಸ್ ಪದ ಬಳಸುವ ಬಗ್ಗೆಯೂ ಶಾಸಕರು ಗಮನಕ್ಕೆ ತಂದಿದ್ದು ಮುಂದಿನ ದಿನಗಳಲ್ಲಿ ಆ ಬಗ್ಗೆಯೂ ಸಮಸ್ಯೆ ಇತ್ಯರ್ಥವಾಗುವ ಸಾಧ್ಯತೆಗಳಿವೆ. ಶಾಸಕರು ಮನವಿ ನೀಡಿದ ಸಂದರ್ಭದಲ್ಲಿ ಇಂಜಿನಿಯರ್ ಗಳಾದ ಜಿ.ಯೋಗೀಶ್ ಪೈ, ಮೊಹಮ್ಮದ್ ಇಕ್ಬಾಲ್ ಉಪಸ್ಥಿತರಿದ್ದರು.
The Urban Development and Municipal Administration Department has resolved technical issues that had stalled building permit approvals across Karnataka for the past two months, following intervention by Mangaluru South MLA D. Vedavyasa Kamath.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am