ಬ್ರೇಕಿಂಗ್ ನ್ಯೂಸ್
04-02-26 09:34 pm Mangalore Correspondent ಕರಾವಳಿ
ಮಂಗಳೂರು, ಫೆ.4: ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಗಿ ನೀಡುವ ತಂತ್ರಾಂಶವು ಸ್ಥಗಿತಗೊಂಡ ಪರಿಣಾಮ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದ ಬಗ್ಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಮನವಿಗೆ ಸ್ಪಂದಿಸಿದ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯು ಸಮಸ್ಯೆಯನ್ನು ಬಗೆಹರಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರಕಾರ ಏಕಾಏಕಿ ನಿರ್ಮಾಣ- 2 ತಂತ್ರಾಂಶವನ್ನು ಸ್ಥಗಿತಗೊಳಿಸಿ ಯುನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಯುಎಲ್ಎಂಎಸ್) ಅನ್ನು ಜಾರಿಗೆ ತಂದಿದ್ದೇ ಸಮಸ್ಯೆಗೆ ಕಾರಣವಾಗಿದ್ದು, ಹಳೆಯ ನಿರ್ಮಾಣ- 2 ತಂತ್ರಾಂಶ ಸಹಿತ ಹೊಸ ಯುಎಲ್ಎಂಎಸ್ ತಂತ್ರಾಂಶವೂ ಇಲ್ಲವಾಗಿ ಜನರಿಗೆ ಕಟ್ಟಡ ಪರವಾನಗಿ ಸಿಗದೇ ಪರದಾಡುವಂತಾಗಿತ್ತು. ಇದರಿಂದಾಗಿ ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಸೇರಿದಂತೆ ಎಲ್ಲಾ ರೀತಿಯ ಕಟ್ಟಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದ ಸಾವಿರಾರು ಮಂದಿ ತಿಂಗಳುಗಟ್ಟಲೆ ಕಾಯುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ, ಕಟ್ಟಡ ಗುತ್ತಿಗೆದಾರರು, ಎಂಜಿನಿಯರ್ ಗಳು, ಕೂಲಿ ಕಾರ್ಮಿಕರಿಗೂ ಬಹಳಷ್ಟು ಸಮಸ್ಯೆಯಾಗಿತ್ತು ಎಂದು ಶಾಸಕ ಕಾಮತ್ ಅವರು ನಗರಾಭಿವೃದ್ಧಿ ಕಾರ್ಯದರ್ಶಿ ಮತ್ತು ಪೌರಾಡಳಿತ ಇಲಾಖೆಯ ನಿರ್ದೇಶಕರ ಗಮನಕ್ಕೆ ತಂದಿದ್ದರು.
ಇದೀಗ ಲ್ಯಾಂಡ್ ಅಂಡ್ ಬಿಲ್ಡಿಂಗ್ ಪ್ಲಾನ್ ಎಪ್ರೂವಲ್ ಸಿಸ್ಟಮ್ (ಎಲ್ ಬಿಪಿಎಎಸ್) - ನಿರ್ಮಾಣ - 2 ತಂತ್ರಾಂಶವನ್ನು ಅಡಿಟ್ ಪೂರ್ಣಗೊಳಿಸಿ ಮರು ಜಾರಿಗೆ ತರಲಾಗಿದ್ದು ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸಿಕೊಳ್ಳುವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರಾಡಳಿತ ಇಲಾಖೆ ಆದೇಶ ಮಾಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಶಾಸಕರು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದ್ದು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಅಲ್ಲದೇ ನೂತನ ತಂತ್ರಾಂಶದಲ್ಲಿ ಡಿಪ್ಲೋಮಾ ಸಿವಿಲ್ ಎಂಜಿನಿಯರ್ಗಳನ್ನು ಸೂಪರ್ವೈಸರ್ ಎಂದು ಉಲ್ಲೇಖಿಸಿರುವುದರಿಂದ ಅನುಭವಿ ವೃತ್ತಿಪರ ಎಂಜಿನಿಯರ್ಗಳ ಸಹಿತ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆ ಪದದ ಬದಲು ಸಿವಿಲ್ ಎಂಜಿನಿಯರ್ಸ್ ಪದ ಬಳಸುವ ಬಗ್ಗೆಯೂ ಶಾಸಕರು ಗಮನಕ್ಕೆ ತಂದಿದ್ದು ಮುಂದಿನ ದಿನಗಳಲ್ಲಿ ಆ ಬಗ್ಗೆಯೂ ಸಮಸ್ಯೆ ಇತ್ಯರ್ಥವಾಗುವ ಸಾಧ್ಯತೆಗಳಿವೆ. ಶಾಸಕರು ಮನವಿ ನೀಡಿದ ಸಂದರ್ಭದಲ್ಲಿ ಇಂಜಿನಿಯರ್ ಗಳಾದ ಜಿ.ಯೋಗೀಶ್ ಪೈ, ಮೊಹಮ್ಮದ್ ಇಕ್ಬಾಲ್ ಉಪಸ್ಥಿತರಿದ್ದರು.
The Urban Development and Municipal Administration Department has resolved technical issues that had stalled building permit approvals across Karnataka for the past two months, following intervention by Mangaluru South MLA D. Vedavyasa Kamath.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm