ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್ ಎತ್ತಂಗಡಿ, ಹುದ್ದೆಯಿಂದ ತೆರವುಗೊಳಿಸಿ ರಾಜ್ಯ ಸರ್ಕಾರ ಆದೇಶ 

05-02-26 09:29 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಅಧಿಕಾರಿಯಾಗಿದ್ದ ಡಾ.ಮಹಮ್ಮದ್ ಇಕ್ಬಾಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ತೆರವು ಮಾಡಲಾಗಿದೆ. ರಾಜ್ಯ ಸರ್ಕಾರ ಇವರ ಸೇವೆಯನ್ನು ಹಿಂಪಡೆದು ಆದೇಶ ಮಾಡಿದ್ದು ಮುಂದಿನ ಸ್ಥಳ ನಿಯುಕ್ತಿಗಾಗಿ ಬೆಂಗಳೂರು ಆಯುಷ್ ಇಲಾಖೆಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದೆ. 

ಮಂಗಳೂರು, ಫೆ.5 : ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಅಧಿಕಾರಿಯಾಗಿದ್ದ ಡಾ.ಮಹಮ್ಮದ್ ಇಕ್ಬಾಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ತೆರವು ಮಾಡಲಾಗಿದೆ. ರಾಜ್ಯ ಸರ್ಕಾರ ಇವರ ಸೇವೆಯನ್ನು ಹಿಂಪಡೆದು ಆದೇಶ ಮಾಡಿದ್ದು ಮುಂದಿನ ಸ್ಥಳ ನಿಯುಕ್ತಿಗಾಗಿ ಬೆಂಗಳೂರು ಆಯುಷ್ ಇಲಾಖೆಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಔಷಧಿ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.  ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಈ ಅಕ್ರಮದ ಬಗ್ಗೆ ಆರೋಪ ಮಾಡಿದ್ದರು. ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನ ಆಯುಷ್ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. 

ಈ ನಡುವೆ, 2024ರ ಸೆಪ್ಟೆಂಬರ್ ನಲ್ಲಿ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖಾ ಆಯುಕ್ತ ಹರ್ಷ ಗುಪ್ತಾ ಅವರಿಗೆ ಸೂಚಿಸಿದ್ದರು.‌ ಆದರೆ ಈ ತನಿಖೆ ಏನಾಗಿದೆ, ವರದಿ ಸಲ್ಲಿಕೆ ಆಗಿದೆಯೇ ಎನ್ನುವುದು ರಹಸ್ಯವಾಗಿಯೇ ಇತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಗೆ ಸಿಎಸ್ಆರ್ ನಿಧಿಯಡಿ 28 ಲಕ್ಷದ ಉಪಕರಣ ಖರೀದಿಸಲಾಗಿತ್ತು. ಇದರಲ್ಲಿ ಅವ್ಯವಹಾರ ಆಗಿದೆಯೆಂದು ಆರ್ಟಿಐ ಕಾರ್ಯಕರ್ತರು ಆರೋಪ ಮಾಡಿದ್ದರು. ‌

Dr. Mohammed Iqbal, who was serving as the District AYUSH Officer of Dakshina Kannada, has been removed from his post with immediate effect. The state government has withdrawn his services and directed him to report to the AYUSH Department headquarters in Bengaluru for further posting orders.