ಬ್ರೇಕಿಂಗ್ ನ್ಯೂಸ್
06-02-26 09:01 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಧರ್ಮಸ್ಥಳಕ್ಕೆ ತೆರಳಿದ್ದ ವ್ಯಕ್ತಿಯೊಬ್ಬ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಲ್ಲಿ ನೀವು ಇದೇ ಶಿವರಾತ್ರಿಗೆ ನಿಮ್ಮ ಪಟ್ಟವನ್ನು ಬಿಟ್ಟುಕೊಡಬೇಕು ಎಂದು ಹೇಳಿ ಆವಾಜ್ ಹಾಕಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ವಾಟ್ಸಪ್ ಮತ್ತು ಇನ್ ಸ್ಟಾ ಗ್ರಾಮಿನಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗೂ ಕಾರಣವಾಗಿದೆ. ವ್ಯಕ್ತಿಯೊಬ್ಬ ವೀರೇಂದ್ರ ಹೆಗ್ಗಡೆಯವರ ಬೂಡಿನ ಮನೆಯ ಒಳಗಡೆ ಇತರೇ ಭಕ್ತರಂತೆ ಸರದಿಯಲ್ಲಿ ಹೋಗಿದ್ದು ಈ ವೇಳೆ ತನ್ನಲ್ಲಿರುವ ಮೊಬೈಲ್ ಕ್ಯಾಮರಾವನ್ನು ರೆಕಾರ್ಡ್ ನಲ್ಲಿ ಇಟ್ಟಿದ್ದು ಕಂಡುಬರುತ್ತದೆ. ಆನಂತರ ತನ್ನ ಸರದಿ ಬಂದಾಗ, ಹೆಗ್ಗಡೆಯವರನ್ನು ಕುರಿತಾಗಿ ನೇರ ಪ್ರಶ್ನೆ ಮಾಡಿದ್ದಾನೆ.

ಈ ಕ್ಷೇತ್ರದಲ್ಲಿ ಧರ್ಮ ಇದೆಯೆಂದು ನೀವು ಹೇಳುತ್ತೀರಾ ಎಂದು ಪ್ರಶ್ನೆ ಮಾಡಿರುವ ಆ ವ್ಯಕ್ತಿ, ಆನಂತರ ಹತ್ತು ವರ್ಷಗಳ ಹಿಂದೂ ಇಲ್ಲಿಗೆ ಬಂದು ಪ್ರಶ್ನಿಸಿದ್ದೆ. ನಿಮಗೆ ನೆನಪಿದೆಯಾ ಎಂದು ಕೇಳುತ್ತಾನೆ. ನೆನಪು ಇದೆ ಎಂದು ಹೆಗ್ಗಡೆ ಹೇಳಿದಾಗ, ನೀವು ಈಗಲೂ ಈ ಕ್ಷೇತ್ರದಲ್ಲಿ ಧರ್ಮ ಇದೆ ಎಂದು ಹೇಳುತ್ತೀರಾ.. ನೀವು ಧರ್ಮ ಇದೆಯೆಂದು ಅಣ್ಣಪ್ಪನ ಎದುರಲ್ಲಿ ಹೇಳುತ್ತೀರಾ. ಮುಂದಿನ ಮಕರ ಸಂಕ್ರಾಂತಿಯಂದು ದೈವದ ಮುಂದೆ ಬರಲು ರೆಡಿ ಇದ್ದೀರಾ ಎಂದು ಪ್ರಶ್ನೆ ಮಾಡುತ್ತಾನೆ. ನಾನು ಕದ್ರಿ ದೇವಸ್ಥಾನದ ಅಂಗಣಕ್ಕೂ ಬೈಕಿನಲ್ಲಿ ಹೋಗಿದ್ದೆ. ಆನಂತರ, ಒಳಗಡೆ ಹೋಗಿ ದೇವಸ್ಥಾನದ ಶಿಖರಕ್ಕೆ ಹತ್ತಿದ್ದೇನೆ. ಧರ್ಮಸ್ಥಳಕ್ಕೂ ಕದ್ರಿಯೇ ಮೂಲ. ನೀವು ಈ ಕ್ಷೇತ್ರವನ್ನು ಬಿಟ್ಟು ಕೊಡಬೇಕು ಎಂದು ಹೇಳುತ್ತಾನೆ.
ಇದಲ್ಲದೆ, ನಿಮ್ಮ ಜೊತೆಗೆ ಒಬ್ಬನೇ ಮಾತನಾಡಬೇಕೆಂಬ ಬಯಕೆ ಇದೆ, ಸಿಬಂದಿ ಯಾರೂ ಜೊತೆಗೆ ಇರಬಾರದು ಎಂದು ಹೇಳುತ್ತಾನೆ. ಅದಕ್ಕೆ ಹೆಗ್ಗಡೆಯವರು ಅದು ಆಗಲ್ಲ, ಇಲ್ಲಿಯೇ ಪ್ರಶ್ನೆ ಕೇಳಿ ಎನ್ನುತ್ತಾರೆ. ಹೆಗ್ಗಡೆಯವರ ಪರಿಚಾರಕರು, ಸಿಬಂದಿಗಳ ಎದುರಲ್ಲೇ ಈ ವ್ಯಕ್ತಿ ಪ್ರಶ್ನೆ ಮಾಡಿದ್ದು, ಆನಂತರ ಅಣ್ಣಪ್ಪ ನೋಡಿಕೊಳ್ಳುತ್ತಾನೆ ಎಂದು ಹೇಳುತ್ತ ಹೊರ ನಡೆದಿದ್ದಾನೆ. ಇದರ ವಿಡಿಯೋವನ್ನು ಸೌಜನ್ಯಾ ಹೋರಾಟಗಾರರು ತಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ. ಈ ರೀತಿ ಮಾತನಾಡಿ ವಿಡಿಯೋ ಮಾಡಿರುವ ವ್ಯಕ್ತಿ ಮಂಗಳೂರಿನ ಉಳ್ಳಾಲದ ನಿವಾಸಿಯೆಂದು ತಿಳಿದುಬಂದಿದೆ.
A video has gone viral on social media showing a man confronting Dharmasthala Dharmadhikari Dr. D. Veerendra Heggade and asking him to relinquish his position by Shivaratri.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm