ಬ್ರೇಕಿಂಗ್ ನ್ಯೂಸ್
06-02-26 09:01 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಧರ್ಮಸ್ಥಳಕ್ಕೆ ತೆರಳಿದ್ದ ವ್ಯಕ್ತಿಯೊಬ್ಬ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಲ್ಲಿ ನೀವು ಇದೇ ಶಿವರಾತ್ರಿಗೆ ನಿಮ್ಮ ಪಟ್ಟವನ್ನು ಬಿಟ್ಟುಕೊಡಬೇಕು ಎಂದು ಹೇಳಿ ಆವಾಜ್ ಹಾಕಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ವಾಟ್ಸಪ್ ಮತ್ತು ಇನ್ ಸ್ಟಾ ಗ್ರಾಮಿನಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗೂ ಕಾರಣವಾಗಿದೆ. ವ್ಯಕ್ತಿಯೊಬ್ಬ ವೀರೇಂದ್ರ ಹೆಗ್ಗಡೆಯವರ ಬೂಡಿನ ಮನೆಯ ಒಳಗಡೆ ಇತರೇ ಭಕ್ತರಂತೆ ಸರದಿಯಲ್ಲಿ ಹೋಗಿದ್ದು ಈ ವೇಳೆ ತನ್ನಲ್ಲಿರುವ ಮೊಬೈಲ್ ಕ್ಯಾಮರಾವನ್ನು ರೆಕಾರ್ಡ್ ನಲ್ಲಿ ಇಟ್ಟಿದ್ದು ಕಂಡುಬರುತ್ತದೆ. ಆನಂತರ ತನ್ನ ಸರದಿ ಬಂದಾಗ, ಹೆಗ್ಗಡೆಯವರನ್ನು ಕುರಿತಾಗಿ ನೇರ ಪ್ರಶ್ನೆ ಮಾಡಿದ್ದಾನೆ.

ಈ ಕ್ಷೇತ್ರದಲ್ಲಿ ಧರ್ಮ ಇದೆಯೆಂದು ನೀವು ಹೇಳುತ್ತೀರಾ ಎಂದು ಪ್ರಶ್ನೆ ಮಾಡಿರುವ ಆ ವ್ಯಕ್ತಿ, ಆನಂತರ ಹತ್ತು ವರ್ಷಗಳ ಹಿಂದೂ ಇಲ್ಲಿಗೆ ಬಂದು ಪ್ರಶ್ನಿಸಿದ್ದೆ. ನಿಮಗೆ ನೆನಪಿದೆಯಾ ಎಂದು ಕೇಳುತ್ತಾನೆ. ನೆನಪು ಇದೆ ಎಂದು ಹೆಗ್ಗಡೆ ಹೇಳಿದಾಗ, ನೀವು ಈಗಲೂ ಈ ಕ್ಷೇತ್ರದಲ್ಲಿ ಧರ್ಮ ಇದೆ ಎಂದು ಹೇಳುತ್ತೀರಾ.. ನೀವು ಧರ್ಮ ಇದೆಯೆಂದು ಅಣ್ಣಪ್ಪನ ಎದುರಲ್ಲಿ ಹೇಳುತ್ತೀರಾ. ಮುಂದಿನ ಮಕರ ಸಂಕ್ರಾಂತಿಯಂದು ದೈವದ ಮುಂದೆ ಬರಲು ರೆಡಿ ಇದ್ದೀರಾ ಎಂದು ಪ್ರಶ್ನೆ ಮಾಡುತ್ತಾನೆ. ನಾನು ಕದ್ರಿ ದೇವಸ್ಥಾನದ ಅಂಗಣಕ್ಕೂ ಬೈಕಿನಲ್ಲಿ ಹೋಗಿದ್ದೆ. ಆನಂತರ, ಒಳಗಡೆ ಹೋಗಿ ದೇವಸ್ಥಾನದ ಶಿಖರಕ್ಕೆ ಹತ್ತಿದ್ದೇನೆ. ಧರ್ಮಸ್ಥಳಕ್ಕೂ ಕದ್ರಿಯೇ ಮೂಲ. ನೀವು ಈ ಕ್ಷೇತ್ರವನ್ನು ಬಿಟ್ಟು ಕೊಡಬೇಕು ಎಂದು ಹೇಳುತ್ತಾನೆ.
ಇದಲ್ಲದೆ, ನಿಮ್ಮ ಜೊತೆಗೆ ಒಬ್ಬನೇ ಮಾತನಾಡಬೇಕೆಂಬ ಬಯಕೆ ಇದೆ, ಸಿಬಂದಿ ಯಾರೂ ಜೊತೆಗೆ ಇರಬಾರದು ಎಂದು ಹೇಳುತ್ತಾನೆ. ಅದಕ್ಕೆ ಹೆಗ್ಗಡೆಯವರು ಅದು ಆಗಲ್ಲ, ಇಲ್ಲಿಯೇ ಪ್ರಶ್ನೆ ಕೇಳಿ ಎನ್ನುತ್ತಾರೆ. ಹೆಗ್ಗಡೆಯವರ ಪರಿಚಾರಕರು, ಸಿಬಂದಿಗಳ ಎದುರಲ್ಲೇ ಈ ವ್ಯಕ್ತಿ ಪ್ರಶ್ನೆ ಮಾಡಿದ್ದು, ಆನಂತರ ಅಣ್ಣಪ್ಪ ನೋಡಿಕೊಳ್ಳುತ್ತಾನೆ ಎಂದು ಹೇಳುತ್ತ ಹೊರ ನಡೆದಿದ್ದಾನೆ. ಇದರ ವಿಡಿಯೋವನ್ನು ಸೌಜನ್ಯಾ ಹೋರಾಟಗಾರರು ತಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ. ಈ ರೀತಿ ಮಾತನಾಡಿ ವಿಡಿಯೋ ಮಾಡಿರುವ ವ್ಯಕ್ತಿ ಮಂಗಳೂರಿನ ಉಳ್ಳಾಲದ ನಿವಾಸಿಯೆಂದು ತಿಳಿದುಬಂದಿದೆ.
A video has gone viral on social media showing a man confronting Dharmasthala Dharmadhikari Dr. D. Veerendra Heggade and asking him to relinquish his position by Shivaratri.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm