ಬ್ರೇಕಿಂಗ್ ನ್ಯೂಸ್
07-02-26 12:55 pm HK staffer ಕರಾವಳಿ
ಕುಂದಾಪುರ, ಫೆ.7: ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಕೆಲ ಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ ಅವರು 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಅಪ್ಪಣ್ಣ ಹೆಗ್ಡೆ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರಲ್ಲದೇ ಸುದೀರ್ಘ ಕಾಲ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿದ್ದರು. ಅವರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದು, ಧಾರ್ಮಿಕ ಕ್ಷೇತ್ರದಲ್ಲಿ ಅತ್ಯಂತ ಮುತುವರ್ಜಿ ವಹಿಸಿ ಸೇವೆ ಸಲ್ಲಿಸಿದ ಧಾರ್ಮಿಕ ಮುಂದಾಳು, ಶಿಕ್ಷಣ ತಜ್ಞ ಹಾಗೂ ಕಂಬಳ ಕ್ಷೇತ್ರದ ಮಹತ್ವದ ಸಂಘಟಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ಅವರ ನಡೆ ನುಡಿಗಳು, ಜೀವನ ಶೈಲಿ, ಮಾರ್ಗದರ್ಶನ ಮುಂದಿನ ಪೀಳಿಗೆಗೆ ಮಾದರಿಯಾಗಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm