ಬ್ರೇಕಿಂಗ್ ನ್ಯೂಸ್
01-01-21 01:34 pm Udupi Correspondent ಕರಾವಳಿ
ಉಡುಪಿ, ಜ.1: ಶಾಲೆ, ಕಾಲೇಜು ಮಕ್ಕಳ ಪಾಲಿಗೆ ಹೊಸ ವರ್ಷ ಹೊಸ ಕಳೆ ತಂದಿದೆ. ಕಡೆಗೂ ರಾಜ್ಯ ಸರಕಾರ ಶಾಲೆಯನ್ನು ಆರಂಭಿಸಲು ಹಸಿರು ನಿಶಾನೆ ನೀಡಿದ್ದು ಬೋರು ಹಿಡಿಸಿದ್ದ ಮಕ್ಕಳಲ್ಲಿ ಖುಷಿ ಇಮ್ಮಡಿಸಿದೆ.

ಕಳೆದ ವರ್ಷದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜಿಗೆ ಪೂರ್ತಿ ಬ್ರೇಕ್ ಬಿದ್ದಿತ್ತು. ಕೊರೊನಾ ಮಹಾಮಾರಿ ಜಗತ್ತನ್ನು ಕಂಗೆಡಿಸಿದ ಬಳಿಕ ಹತ್ತು ತಿಂಗಳು ಕಳೆದು ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಮಕ್ಕಳಲ್ಲೂ ಹೊಸ ಕಳೆ ಮೂಡಿದೆ. ಶಾಲೆಯ ಗೆಳೆಯರು ಇಲ್ಲದೆ, ಮನೆಯಲ್ಲಿ ಕುಳಿತು ಬೋರು ಹಿಡಿದಿದ್ದ ಮಕ್ಕಳು ಇಂದು ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಆದರೆ, ವಿಶೇಷ ಅನಿಸಿದ್ದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಲೆಯಲ್ಲಿ ಮಕ್ಕಳಿಗೆ ನೀಡಿದ ಗೌರವ.


ವಾದ್ಯ, ನಗಾರಿಗಳ ವಾದನದ ಜೊತೆ ಮಕ್ಕಳನ್ನು ಊರವರು ಮತ್ತು ಶಿಕ್ಷಕರು ಗೌರವಪೂರ್ವಕವಾಗಿ ಶಾಲೆಗೆ ಬರಮಾಡಿಕೊಂಡಿದ್ದಾರೆ. ಮಕ್ಕಳು ಸಾಲಾಗಿ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದರೆ, ಅತ್ತ ಸುಶ್ರಾವ್ಯವವಾಗಿ ವಾದ್ಯ ನುಡಿಸುತ್ತಿದ್ದರು. ಶಾಲೆಗೆ ಎಂಟ್ರಿ ಪಡೆಯುತ್ತಿದ್ದಂತೆ ಸ್ಯಾನಿಟೈಸ್ ಹಾಕಿದರೆ, ಮತ್ತೊಂದು ಕಡೆ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ರೀತಿಯ ವಿಶಿಷ್ಟ ಶಾಲಾರಂಭ ನಡೆದಿದ್ದು ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಶಾಲೆಯನ್ನು ಹೂಗಳಿಂದ ಅಲಂಕರಿಸಿ, ದ್ವಾರಕ್ಕೆ ಬಾಳೆಗಿಡವನ್ನು ಕಟ್ಟಿ ಊರಿನ ಗಣ್ಯರು, ಶಿಕ್ಷಕರೊಂದಿಗೆ ಸೇರಿ ವಿಶಿಷ್ಟ ರೀತಿಯಲ್ಲಿ ಶಾಲೆಗೆ ಮಕ್ಕಳನ್ನು ಎಂಟ್ರಿ ಮಾಡಿಸಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
Video:
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm