ಬ್ರೇಕಿಂಗ್ ನ್ಯೂಸ್
08-02-26 10:10 pm HK News Desk ಕರಾವಳಿ
ಉಡುಪಿ, ಫೆ.8: ಕೇಂದ್ರ ಸರ್ಕಾರದ 'ಜಾಗತಿಕ ಸ್ಪರ್ಧಾತ್ಮಕ ಪ್ರವಾಸಿ ತಾಣಗಳ ಅಭಿವೃದ್ಧಿ ರಾಷ್ಟ್ರೀಯ ಅಭಿಯಾನ' ಅಡಿಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ 'ರಜತಾದ್ರಿ'ಯಲ್ಲಿ ನಡೆದ ಸಭೆಯಲ್ಲಿ ಅವರು ಈ ವಿಷಯ ಹಂಚಿಕೊಂಡರು.
ಕೋಡಿ-ಕನ್ಯಾನ, ಕೋಡಿ-ಕುಂದಾಪುರ, ಬಾರ್ಕೂರು ಬಂದರು ಪ್ರದೇಶ ಮತ್ತು ತ್ರಾಸಿ-ಮರವಂತೆ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲಾಗಿದೆ. ಅಂತಿಮವಾಗಿ ಒಂದು ತಾಣವನ್ನು ಸಮಗ್ರ ಅಭಿವೃದ್ಧಿಗೆ ಆಯ್ಕೆ ಮಾಡಲಿದ್ದು ಆಯ್ಕೆಯಾದ ತಾಣದಲ್ಲಿ ನವೀಕರಿಸಬಹುದಾದ ಇಂಧನ ಬಳಕೆ, ಮೂಲಸೌಕರ್ಯ ವೃದ್ಧಿ, ಜಾಗತಿಕ ಮಟ್ಟದ ಪ್ರಚಾರ ಮತ್ತು ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲಾಗುವುದು.
ಯೋಜನೆಯಡಿ ದೇಶಾದ್ಯಂತ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ₹300 ಕೋಟಿ ಅನುದಾನ ಮೀಸಲಿಟ್ಟಿದೆ. ಪರಿಸರ ಸಹ್ಯ ಜವಾಬ್ದಾರಿಯುತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಈ ಯೋಜನೆಯ ಮುಖ್ಯ ಗುರಿ. ನೈಸರ್ಗಿಕ ಮತ್ತು ಸಾಂಸ್ಕೃತಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ, ಪರಿಸರ ಸ್ನೇಹಿ ರೀತಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಮೂಲಸೌಕರ್ಯ ಒದಗಿಸಲಾಗುವುದು. ಯೋಜನೆಯಲ್ಲಿ ಭೂಮಿಯನ್ನು ಸರ್ಕಾರ ನೀಡಲಿದ್ದು, ಖಾಸಗಿ ವಲಯದ ಸಹಭಾಗಿತ್ವಕ್ಕೂ ಅವಕಾಶ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಮಾತನಾಡಿ, "ಉಡುಪಿ ಜಿಲ್ಲೆಯು 98 ಕಿ.ಮೀ ಉದ್ದದ ಕರಾವಳಿ, ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯ, ಕೆರೆ-ನದಿಗಳನ್ನು ಹೊಂದಿದ್ದು, ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿವೆ ಎಂದರು. ಸಭೆಯಲ್ಲಿ ಐಪಿಇ ಗ್ಲೋಬಲ್ನ ಹೇಮಲತಾ ಅವರು ಯೋಜನೆಯ ತಾಂತ್ರಿಕ ವಿವರಗಳನ್ನು ಮಂಡಿಸಿದರು.
Four tourist destinations in Udupi district have been identified under the Central Government’s National Mission for Development of Globally Competitive Tourist Destinations, said Kota Srinivasa Poojary, Member of Parliament from Udupi–Chikkamagaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:48 pm
HK News Desk
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm