ಬ್ರೇಕಿಂಗ್ ನ್ಯೂಸ್
11-02-26 03:45 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಮಂಗಳೂರು - ಮೂಡುಬಿದ್ರೆ ಹೆದ್ದಾರಿಯ ಎಡಪದವು ಸಮೀಪದ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಹಾಲಿ ಇರುವ ಹಳೆ ರಸ್ತೆ ಘನ ವಾಹನಗಳ ಓಡಾಟದಿಂದ ಬಿರುಕು ಬಿಟ್ಟಿದೆ. ಅಪಾಯ ಕಂಡುಬಂದಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆಬ್ರವರಿ 12 ರಿಂದ ಮಾರ್ಚ್ 13-ರ ವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಸಲಿದ್ದು ಸದ್ರಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಪರ್ಯಾಯ ರಸ್ತೆಗಳಲ್ಲಿ ಸಂಚಾರಕ್ಕೆ ಸೂಚಿಸಲಾಗಿದೆ.





ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಟಿಯಿಂದ ಮಂಗಳೂರು - ಮೂಡಬಿದ್ರೆ ನಡುವೆ ಸಂಚರಿಸುವ ವಾಹನಗಳು ಕೆಳಗಿನ ಬದಲಿ ರಸ್ತೆಗಳನ್ನು ಉಪಯೋಗಿಸಲು ಸೂಚಿಸಲಾಗಿದೆ.
ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.
ಅಧಿಕಾರಿಗಳ ಅಸಡ್ಡೆಗೆ ಜನರಿಗೆ ಹೊರೆ !
ಎಡಪದವು ಬಳಿಯ ಏರು ರಸ್ತೆ ಇರುವಲ್ಲಿ ಹೊಸ ಹೆದ್ದಾರಿ ಮಾಡುವುದಕ್ಕಾಗಿ ಪ್ರಪಾತ ರೀತಿ ಅಗೆಯಲಾಗಿದೆ. ಕಳೆದ ಬೇಸಗೆಯಲ್ಲಿ ಅಲ್ಲಿ ಕೆಂಪು ಕಲ್ಲು ತೆಗೆದು ಮಾರಾಟ ಮಾಡಲಾಗಿತ್ತು. ಮೇಲ್ಭಾಗದಲ್ಲಿ ರಸ್ತೆ ಇದ್ದರೂ ಅದರ ಅಂಚಿನ ವರೆಗೂ ಅಗೆದಿದ್ದರಿಂದ ಈಗ ಕುಸಿತವಾಗಿದೆ. ಹೆದ್ದಾರಿ ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ಮಾಡಿದ್ದರು. ಈಗ ಕುಸಿಯುತ್ತಿರುವ ಕಾರಣ ಹಳೆ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು- ಮೂಡುಬಿದ್ರೆ ಸಂಪರ್ಕಕ್ಕೆ ಪ್ರಯಾಣಿಕ ವಾಹನಗಳು ಸುತ್ತು ಬಳಸಿ ಹೋಗುವಂತಾಗಿದೆ. ಇಲ್ಲಿ ರಸ್ತೆ ಕುಸಿಯಲು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕಿದೆ.
Due to excavation work for a new highway near Machoor Cross at Edapadavu, the existing Mangaluru–Moodbidri road has developed cracks and become unsafe for heavy vehicles. The National Highways Authority has announced a 30-day closure from February 12 to March 13, with traffic diverted through alternate routes.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm