ಬ್ರೇಕಿಂಗ್ ನ್ಯೂಸ್
12-02-26 03:01 pm Mangalore Correspondent ಕರಾವಳಿ
ಮಂಗಳೂರು, ಫೆ.12 : ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ಕಾರಣದಿಂದ 120ಕ್ಕು ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬುಧವಾರ 30 ರಷ್ಟು ಮಂದಿ ಅನಾರೋಗ್ಯಕ್ಕೆ ತುತ್ತಾಗಿದ್ದು ಸಂಸ್ಥೆ ಆವರಣದ ಚಿಕಿತ್ಸಾಲಯದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ.
ಫೆ.4ರಿಂದ 8ರ ವರೆಗೆ ಎನ್ಐಟಿಕೆ ಕ್ಯಾಂಪಸಿನಲ್ಲಿ ವಿರಾಸತ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ, ಹೊರಗಿನ ಆಹಾರ, ಖಾದ್ಯಗಳ ಸ್ಟಾಲ್ ಹಾಕಲಾಗಿತ್ತು. ಇದನ್ನು ತಿಂದು ಫುಡ್ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಹೊಟ್ಟೆನೋವು, ಲೂಸ್ ಮೋಶನ್ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 2-3 ದಿನದಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆಂಬ ಮಾಹಿತಿ ಇದೆ.
ಘಟನೆ ಹಿನ್ನೆಲೆಯಲ್ಲಿ ಹೊರಗಿನಿಂದ ಆಹಾರ ವಿತರಣೆಯನ್ನು ಒಂದು ವಾರದ ಮಟ್ಟಿಗೆ ನಿರ್ಬಂಧಿಸಲಾಗಿದೆ. ಕುಡಿಯುವ ನೀರು ಪೂರೈಸುವ ವಾಟರ್ ಪ್ಯೂರಿಫೈರ್ ಯಂತ್ರವನ್ನು ಮತ್ತು ನೀರನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ನಲ್ಲಿಯಲ್ಲಿ ಬರುವ ನೀರನ್ನು ನೇರವಾಗಿ ಅಡುಗೆ ಉದ್ದೇಶಕ್ಕೆ ಬಳಸದಂತೆ ಸೂಚಿಸಲಾಗಿದೆ. ನೀರಿನಲ್ಲಿ ತೊಂದರೆ ಇದೆಯೇ ಎಂದು ತಿಳಿಯಲು ಹೊರಗಿನ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ ಎಂದು ಎನ್ಐಟಿಕೆ ನಿರ್ದೇಶಕ ಬಿ.ರವಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೇನೂ ಹೆಚ್ಚಿನ ತೊಂದರೆ ಆಗಿಲ್ಲ. ಈಗ ಬಹಳಷ್ಟು ಮಂದಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಎನ್ಐಟಿಕೆ ಕ್ಯಾಂಪಸ್ ಒಳಗಿನ ಕ್ಯಾಂಟೀನಲ್ಲಿ ಗುಣಮಟ್ಟದ ಆಹಾರ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳ ಬೇಡಿಕೆಯಂತೆ ವಿರಾಸತ್ ಸಾಂಸ್ಕೃತಿಕ ಕಾರ್ಯಕ್ರಮ ಸಂದರ್ಭದಲ್ಲಿ ಹೊರಗಿನ ನಾನ್ ವೆಜ್ ಖಾದ್ಯಗಳ ಸ್ಟಾಲ್ ಹಾಕಲಾಗಿತ್ತು.
Over 120 students at NITK Surathkal fell ill due to suspected food poisoning after consuming food from external stalls during the Virasat event. Students were treated at the campus health centre, and outside food supply has been temporarily banned. Water sources are also being tested as a precaution.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm