ಬ್ರೇಕಿಂಗ್ ನ್ಯೂಸ್
12-02-26 03:38 pm Mangalore Correspondent ಕರಾವಳಿ
ಉಳ್ಳಾಲ, ಫೆ.12 : ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಹಿಂಬದಿ ವಾಹನ ಸವಾರ ಅಪಾಯದ ಮುನ್ಸೂಚನೆ ನೀಡಿದ ಪರಿಣಾಮ ಓಮ್ನಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ರಾ.ಹೆ.66 ರ ಕೋಟೆಕಾರು ಅಡ್ಕ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ತಲಪಾಡಿ ನಿವಾಸಿ ರಿಯಾಝ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್ ಒಂದರಲ್ಲಿ ದುರಸ್ತಿಗೊಳಿಸಲಾಗಿದ್ದ ತನ್ನ ಓಮ್ನಿ ಕಾರನ್ನ ವಾಪಸು ಪಡೆದು ಪೆಟ್ರೋಲ್ ತುಂಬಿಸಿ ತಲಪಾಡಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಕಾರಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಹತ್ತಿದ ವಿಚಾರ ರಿಯಾಝ್ ಅವರ ಗಮನಕ್ಕೆ ಬಂದಿಲ್ಲ. ಈ ವೇಳೆ ಹಿಂಬದಿ ವಾಹನ ಸವಾರರೋರ್ವರು ರಿಯಾಝ್ ಅವರಲ್ಲಿ ಕಾರಲ್ಲಿ ಬೆಂಕಿ ಹಚ್ಚಿಕೊಂಡಿರುವ ವಿಚಾರ ತಿಳಿಸಿದ್ದಾರೆ.






ತಕ್ಷಣವೇ ರಿಯಾಝ್ ಅವರು ಕಾರನ್ನ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಹೊರಗೋಡಿದ್ದಾರೆ. ಕ್ಷಣಾರ್ಧದಲ್ಲಿ ಕಾರಿಗೆ ಸಂಪೂರ್ಣ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಕಾರಿನಲ್ಲಿ ಟ್ಯಾಂಕ್ ತುಂಬಾ ಪೆಟ್ರೋಲ್ ಇದ್ದ ಪರಿಣಾಮ ಕಾರಿಗೆ ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ.
An Omni car suddenly caught fire while moving on NH-66 near Kotekar Adka. The driver, Riyaz from Talapady, was alerted by a motorist behind him and managed to escape safely. The vehicle was completely gutted despite quick action by fire personnel. A full petrol tank is suspected to have worsened the blaze.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm