ಬ್ರೇಕಿಂಗ್ ನ್ಯೂಸ್
12-02-26 10:36 pm Mangalore Correspondent ಕರಾವಳಿ
ಉಳ್ಳಾಲ, ಫೆ.12 : ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಹೆಸರಲ್ಲಿ ಅರ್ಹ ಅಶಕ್ತ ಕುಟುಂಬಗಳಿಗೆ ಈಗಾಗಲೇ ವೈಯಕ್ತಿಕ ನೆಲೆಯಲ್ಲಿ ಆರು ಮನೆಗಳನ್ನ ನಿರ್ಮಿಸಿ ಕೊಡಲಾಗಿದೆ. ಇದೀಗ ಅಡ್ಕ ಶ್ರೀ ಭಗವತಿ ಕ್ಷೇತ್ರದ ದರ್ಶನ ಪಾತ್ರಿ ಶ್ರವಣ್ ಬೆಳ್ಚಪ್ಪಾಡ ಅವರ ಕುಟುಂಬಕ್ಕೆ ಏಳನೇ "ನಮೋ ಕುಟೀರ" ನಿರ್ಮಾಣಕ್ಕೆ ಶಿಲಾನ್ಯಾಸ ನಡೆಸಲಾಗಿದ್ದು ಫಲಾನುಭವಿ ದಂಪತಿಯ ಮುಖದಲ್ಲಿ ಮೂಡಿದ ಮಂದಹಾಸವೇ ನನ್ನ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆಯೆಂದು ಬಿಜೆಪಿ ಮುಖಂಡರು ಹಾಗೂ ದಿ ಮೈಸೂರು ಇಲೆಕ್ಟ್ರಿಕಲ್ಸ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದರು.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕದಲ್ಲಿರುವ ದೊಡ್ಡಮನೆ ತರವಾಡು ಫಲಾನುಭವಿಗಳ ನಿವೇಶನದಲ್ಲಿ ಅಡ್ಕ ಭಗವತಿ ಕ್ಷೇತ್ರದ ಸ್ಥಾನಿಕರು ಹಾಗೂ ದರ್ಶನ ಪಾತ್ರಿಗಳಾದ ಶ್ರವಣ್ ಬೆಳ್ಚಪ್ಪಾಡ ಅವರ ಕುಟುಂಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹೆಸರಲ್ಲಿ ನಿರ್ಮಿಸಿ ಕೊಡುತ್ತಿರುವ ಏಳನೇ(ನಮೋ ಕುಟೀರ) ಮನೆಗೆ ಗುರುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ದಾನ ಕೊಡಲು ಮತ್ತು ಪಡೆಯಲು ನಮಗೆ ಯೋಗವಿರಬೇಕಷ್ಟೆ. ಇಲ್ಲಿ ಅತಿ ಶೀಘ್ರದಲ್ಲೇ ಸುಂದರವಾದ ಮನೆಯನ್ನು ನಿರ್ಮಿಸಿ, ವಾಸ್ತು ಪೂಜೆ, ಗಣ ಹೋಮ, ಊಟೋಪಚಾರವುಳ್ಳ ಸಂಭ್ರಮದ ಗೃಹಪ್ರವೇಶ ಸಮಾರಂಭವನ್ನು ನಡೆಸಲಾಗುವುದು. ಮನೆಯ ಶಿಲಾನ್ಯಾಸದಿಂದ ಹಿಡಿದು ಗೃಹ ಪ್ರವೇಶದ ಸಂಪೂರ್ಣ ಖರ್ಚನ್ನು ವೈಯಕ್ತಿಕ ನೆಲೆಯಲ್ಲಿ ಭರಿಸಲಾಗುವುದು. ನೂತನ ನಿರ್ಮಾಣಗೊಳ್ಳುವ ಮನೆಯಲ್ಲಿ ಶ್ರವಣ್ ಗುರಿಕಾರರ ಕುಟುಂಬವು ಸಂತೋಷ, ನೆಮ್ಮದಿಯಿಂದ ಬಾಳುವಂತಾಗಲಿ ಎಂದರು.


ಕುರ್ನಾಡು ಗ್ರಾಮದ ಅಬೆಮಾರ್ ಎಂಬಲ್ಲಿ ರುಕ್ಮಯ ಮತ್ತು ವಿಜಯ ಎಂಬ ಮಕ್ಕಳಿಲ್ಲದ ವೃದ್ಧ ದಂಪತಿಗೆ ನಿರ್ಮಿಸಲಾದ ಮನೆ ಕೇವಲ ಎರಡೂವರೆ ತಿಂಗಳಲ್ಲೇ ಸಂಪೂರ್ಣಗೊಂಡಿದೆ. ನೂತನ ಮನೆಯ ಗೃಹ ಪ್ರವೇಶವು ಇದೇ ಫೆ.25 ರಂದು ನಡೆಯಲಿದೆ. ಅರ್ಹ ಹತ್ತು ಅಶಕ್ತ ಕುಟುಂಬಗಳಿಗೆ ನಮೋ ಕುಟೀರಗಳ ನಿರ್ಮಾಣ ಯೋಜನೆಯನ್ನು ಹಮ್ಮಿಕೊಂಡಿದ್ದು ಅತಿ ಶೀಘ್ರ ಮತ್ತೆ ಮೂರು ಮನೆಗಳ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರೆವೇರಿಸಲಾಗುವುದು. ದೇವರು ಹರಸಿದರೆ ಮತ್ತಷ್ಟು ಸಮಾಜಮುಖಿ ಕಾರ್ಯಗಳನ್ನ ಮುಂದುವರೆಸುವುದಾಗಿ ಸಂತೋಷ್ ಬೋಳಿಯಾರು ಹೇಳಿದರು.
ಕೋಟೆಕಾರು ನೆಲ್ಲಿಸ್ಥಳ ಶ್ರೀ ಕಾಳಿಕಾಂಬ ಕ್ಷೇತ್ರದ ಅಧ್ಯಕ್ಷರಾದ ಸುಂದರ್ ಆಚಾರ್ಯ ಅವರ ಪೌರೋಹಿತ್ಯದಲ್ಲಿ ನೂತನ ಮನೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿತು. ಅಡ್ಕ ಶ್ರೀ ಭಗವತಿ ಕ್ಷೇತ್ರದ ಮೂಲ ಅರ್ಚಕರಾದ ವಸಂತ ಪೂಜಾರಿ, ದರ್ಶನ ಪಾತ್ರಿ ನವೀನ್ ಬೆಳ್ಚಪ್ಪಾಡ, ಅಶೋಕ್ ಕಾರ್ನವರ್, ರಾಜ ಕಾರ್ನವರ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಕಾರ್ಯವಾಹ ನಾಗೇಶ್ ಕುಂಪಲ, ಕೋಟೆಕಾರು ಪ.ಪಂ ಅಧ್ಯಕ್ಷರಾದ ದಿವ್ಯ ಶೆಟ್ಟಿ, ಉಪಾಧ್ಯಕ್ಷರಾದ ಪ್ರವೀಣ್ ಐ.ಬಗಂಬಿಲ, ಪ.ಪಂ ಸದಸ್ಯರಾದ ಸುಜಿತ್ ಮಾಡೂರು, ರಾಘವ ಗಟ್ಟಿ, ಸೋಮೇಶ್ವರ ಪುರಸಭೆ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗಟ್ಟಿ ಪರ್ಯತ್ತೂರು, ಸದಸ್ಯರಾದ ಜಯಶ್ರೀ ಉಚ್ಚಿಲ್, ಪ್ರಮುಖರಾದ ನಾರಾಯಣ ಕುಂಪಲ, ಸಮ್ಯಕ್ತ್ ರೈ ಬೋಳಿಯಾರ್, ರಾಜೇಶ್ ಮಡಿವಾಳ ಮೊದಲಾದವರು ಉಪಸ್ಥಿತರಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm