ಬ್ರೇಕಿಂಗ್ ನ್ಯೂಸ್
15-02-26 08:52 pm Mangalore Correspondent ಕರಾವಳಿ
ಮಂಗಳೂರು, ಫೆ.15: ಶಿವರಾತ್ರಿ ನಿಮಿತ್ತ ಕಲ್ಲಡ್ಕದ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಆಟೋ ಪಲ್ಟಿಯಾಗಿದ್ದು ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಾರಿಪಳ್ಳ - ಕಡೆಗೋಳಿ ಎಂಬಲ್ಲಿ ನಡೆದಿದೆ.
ಮಂಗಳೂರಿನ ಅತ್ತಾವರದ ಪ್ರಕಾಶ್ ಎಂಬವರ ಪತ್ನಿ ವಿಶಾಲಾಕ್ಷಿ (43) ಮೃತ ಮಹಿಳೆ. ಇವರು ತನ್ನ ತಂಗಿ ಮತ್ತು ಅವರ ಮಕ್ಕಳ ಜೊತೆಗೆ ಸಂಬಂಧಿಕರ ಆಟೋದಲ್ಲಿ ಮಂಗಳೂರಿನಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರಿಪಳ್ಳ - ಪೊಳಲಿ ದ್ವಾರ ಕಡೆಯಿಂದ ಬೈಕ್ ಸವಾರನೊಬ್ಬ ನುಗ್ಗಿಸಿದ್ದು ಈ ವೇಳೆ ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಇವರಿದ್ದ ಆಟೋ ಅಲ್ಲಿ ನಿಂತಿದ್ದ ಮತ್ತೊಂದು ಆಟೋಗೆ ಡಿಕ್ಕಿಯಾಗಿ ರಸ್ತೆಗೆ ಪಲ್ಟಿಯಾಗಿದೆ.
ಅಪಘಾತ ಸಂದರ್ಭದಲ್ಲಿ ಬದಿಯಲ್ಲಿ ಕುಳಿತಿದ್ದ ವಿಶಾಲಾಕ್ಷಿ ಅವರು ರಸ್ತೆಗಪ್ಪಳಿಸಿದ್ದರಿಂದ ತಲೆಗೆ ಪೆಟ್ಟು ಬಿದ್ದಿದೆ. ಉಳಿದವರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಕೂಡಲೇ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಬೈಕ್ ಡಿಕ್ಕಿಯಾದರೂ ಆತನಿಗೆ ತೊಂದರೆ ಆಗಿಲ್ಲ. ಬಂಟ್ವಾಳ ಗ್ರಾಮಾಂತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವರಾತ್ರಿ ನಿಮಿತ್ತ ನರಹರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು ಕುಟುಂಬಕ್ಕೆ ಶಾಕ್ ಆಗಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am