Mangalore Ullal Accident: ಉಳ್ಳಾಲ ; ಅತಿ ವೇಗದಿಂದ ನಿಯಂತ್ರಣಕ್ಕೆ ಸಿಗದ ಬೈಕ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ, ಕಡ್ಡಿಯಂತೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು 

16-02-26 11:13 pm       Mangaluru Staffer   ಕರಾವಳಿ

ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ಪಾರಾದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ನಡೆದಿದೆ. ಅಪಘಾತ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಮಂಗಳೂರು, ಫೆ.16: ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ಪಾರಾದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ನಡೆದಿದೆ. ಅಪಘಾತ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬೈಕಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬಿಜಾಪುರ ಮೂಲದವರು ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನೇರವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಇದರ ರಭಸಕ್ಕೆ ಕಂಬ ಕಡ್ಡಿ ಮುರಿದು ಬಿದ್ದಂತೆ ತುಂಡಾಗಿ ಬಿದ್ದಿದೆ‌. 

ಡಿಕ್ಕಿಯಾಗುತ್ತಲೇ ಕಂಬ ರಸ್ತೆಗೆ ಬಿದ್ದಿದ್ದು ಮಧ್ಯದಲ್ಲಿ ವಿದ್ಯುತ್ ತಂತಿಯೂ ಬಿದ್ದಿದೆ. ಕೂಡಲೇ ಜನ ಸೇರಿದರೂ ಕರೆಂಟ್ ಇದೆಯೆಂಬ ಭಯದಲ್ಲಿ ಹತ್ತಿರ ಹೋಗಲಿಲ್ಲ. ಇಬ್ಬರು ಸವಾರರು ಕೂಡ ರಸ್ತೆಗೆ ಬಿದ್ದು ಒಂದಷ್ಟು ಹೊತ್ತು ಹೊರಳಾಡಿದ್ದಾರೆ. ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ತೊಂದರೆ ಉಂಟಾಗಿಲ್ಲ. ಪೊಲೀಸರು ಕೇಸು ದಾಖಲಿಸಿಲ್ಲ‌. ಮೆಸ್ಕಾಂ ಇಲಾಖೆಯವರು ಕೇಸು ಮಾಡಿದ್ದಾರೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ದೂರಕ್ಕೆ ಬಿದ್ದಿದ್ದಾರೆ.