ಬ್ರೇಕಿಂಗ್ ನ್ಯೂಸ್
18-02-26 11:24 pm Mangaluru Staffer ಕರಾವಳಿ
ಮಂಗಳೂರು, ಫೆ.18: ಕಳೆದ ಮಳೆಗಾಲದಲ್ಲಿ ಮನೆ ಕುಸಿದು ತನ್ನೆರಡು ಮಕ್ಕಳನ್ನು ಮತ್ತು ಎರಡೂ ಕಾಲುಗಳನ್ನು ಕಳಕೊಂಡ ಮಂಜನಾಡಿಯ ಅಶ್ವಿನಿ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ, ಸರ್ಕಾರದ ಪರಿಹಾರವೂ ಸಿಕ್ಕಿಲ್ಲ ಎಂದು ಆಕೆಯ ಕುಟುಂಬಸ್ಥರು ಹಾಗೂ ಸಾಮಾಜಿಕ ಕಾರ್ಯಕರ್ತರು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ ಭಟ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಗುಡ್ಡ ಕುಸಿತದಿಂದ ಸಾವು ಬದುಕಿನ ನಡುವೆ ಹೋರಾಡಿದ್ದ ಅಶ್ವಿನಿ ಎರಡು ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದು ಎರಡು ಕಾಲುಗಳನ್ನೂ ಕಳಕೊಂಡಿದ್ದರು. ಸದ್ಯ, ತನ್ನದಲ್ಲದ ತಪ್ಪಿಗೆ ಇನ್ನೊಬ್ಬರ ಆಸರೆಯಲ್ಲಿ ಬದುಕುವ ಸ್ಥಿತಿಯಾಗಿದೆ. ಇವರ ಕುಟುಂಬಕ್ಕೆ ಅತ್ತ ಮನೆಯೂ ಸಿಕ್ಕಿಲ್ಲ, ಇತ್ತ ಪರಿಹಾರವೂ ಸಿಕ್ಕಿಲ್ಲ. ನ್ಯಾಯಕ್ಕಾಗಿ ಅಧಿಕಾರಿಗಳ ಬಳಿ ಅಲೆದು ಸುಸ್ತಾಗಿ ಈಗ ಮಂಗಳೂರಿಗೆ ಬಂದ ಮಾನವ ಹಕ್ಕು ಆಯೋಗದ ಅಧ್ಯಕ್ಷರನ್ನು ಭೇಟಿಯಾಗಿ ನೋವು ಹೇಳಿಕೊಂಡಿದ್ದಾರೆ.

2025ರ ಮೇ 30 ರಂದು ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ದುರಂತ ಸಂಭವಿಸಿತ್ತು. ಮನೆಯ ಅಡಿಯಲ್ಲಿ ಸಿಲುಕಿದ್ದ ಅಶ್ವಿನಿ ಅವರ ಇಬ್ಬರು ಮಕ್ಕಳು ಮತ್ತು ಅತ್ತೆ ಸಾವನ್ನಪ್ಪಿದ್ದರು. ಮಾವ ಕಾಂತಪ್ಪ ಪೂಜಾರಿ ಅವರೂ ತೀವ್ರ ಏಟು ಬಿದ್ದು ಆಸ್ಪತ್ರೆ ಸೇರಿದ್ದರು. ತೀವ್ರ ಗಾಯಗೊಂಡಿದ್ದ ಅಶ್ವಿನಿ ಅವರ ಎರಡು ಕಾಲುಗಳನ್ನು ಆಸ್ಪತ್ರೆಯಲ್ಲಿ ಕತ್ತರಿಸಬೇಕಾಗಿ ಬಂದಿತ್ತು. ಸರ್ಕಾರ ನೈಸರ್ಗಿಪ ವಿಕೋಪ ಅಂತ ಎರಡು ಲಕ್ಷ ಪರಿಹಾರ ಕೊಟ್ಟು ಕೈತೊಳೆದುಕೊಂಡಿತ್ತು. ಆದ್ರೆ ಇದು ಪ್ರಾಕೃತಿಕ ವಿಕೋಪ ಅಲ್ಲ. ಮಾನವ ನಿರ್ಮಿತ ಕೃತ್ಯದ ಘಟನೆ ಅಂತ ಅಶ್ವಿನಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆದ್ರೆ ಅಲ್ಲಿ ರಸ್ತೆ ಮಾಡಲು ಗುಡ್ಡ ಕಡಿಯಲಾಗಿದೆ ಎಂದು ನೆಪ ಹೇಳಿ ಜಿಪಂ ಎಂಜಿನಿಯರ್ ಗಳು ತಮ್ಮ ವರದಿಯನ್ನೇ ಬುಡಮೇಲು ಮಾಡಿದ್ದರು. ಮಾನವೀಯ ಗುಣವನ್ನೆ ಸಾಯುವಂತೆ ಮಾಡಿದ್ದರು.
ಆಬಳಿಕ ಪದೇ ಪದೇ ಆಂಬುಲೆನ್ಸ್ ನಲ್ಲಿ ಬಂದು ಜಿಲ್ಲಾಧಿಕಾರಿ ಮೊರೆ ಹೋದರೂ ನ್ಯಾಯ ಸಿಕ್ಕಿಲ್ಲ. ಕ್ಷೇತ್ರದ ಶಾಸಕ ಖಾದರ್ ಸ್ಪೀಕರ್ ಆಗಿದ್ದರೂ ನ್ಯಾಯದ ಕದ ತೆರೆಯಲಿಲ್ಲ. ಅಶ್ವಿನಿ ಅವರನ್ನು ವೀಲ್ ಚೇರ್ ನಲ್ಲಿ ಕೂರಿಸಿಕೊಂಡು ಬುಧವಾರ ಮಂಗಳೂರಿನ ಜಿಪಂ ಕಚೇರಿಗೆ ಬಂದಿದ್ದ ಕುಟುಂಬಸ್ಥರು ಮಾನವ ಹಕ್ಕು ಆಯೋಗದ ಅಧ್ಯಕ್ಷ ಶ್ಯಾಂ ಭಟ್ ಅವರನ್ನು ಭೇಟಿ ಮಾಡಿಸಿದ್ದಾರೆ. ಜಿಲ್ಲಾಡಳಿತ ಕೊಟ್ಟ ಪರಿಹಾರ ಅಶ್ವಿನಿಯ ಚಿಕಿತ್ಸೆಗೂ ಸಾಕಾಗಿಲ್ಲ. ಸದ್ಯಕ್ಕೆ ಈಕೆಯನ್ನು ತಾಯಿಯೇ ಆರೈಕೆ ಮಾಡಿ ನೋಡಿಕೊಳ್ಳುತ್ತಿದ್ದಾರೆ. ಮುಂದೆ ಅವರಿಂದ ಆಗದಿದ್ರೆ ಅಶ್ವಿನಿಗೆ ಭಿಕ್ಷೆ ಬೇಡುವ ಸ್ಥಿತಿ ಬರುತ್ತೆ. ಇತ್ತ ಇದ್ದ ಮನೆಯೂ ಇಲ್ಲ. ಆದ್ದರಿಂದ ಮಾನವ ಕೃತ ದುರಂತ ಆಗಿರುವುದರಿಂದ 5 ಕೋಟಿ ಗರಿಷ್ಠ ಪರಿಹಾರ ನೀಡಬೇಕು ಅನ್ನುವ ಬೇಡಿಕೆಯನ್ನು ಇಟ್ಟಿದ್ದಾರೆ. ಆಯೋಗದ ಅಧಿಕಾರಿಗಳು ಸರ್ಕಾರದ ಜೊತೆ ಮಾತುಕತೆ ಮಾಡುತ್ತೇವೆಂದು ಹೇಳಿ ತೆರಳಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm