ಬ್ರೇಕಿಂಗ್ ನ್ಯೂಸ್
19-02-26 03:54 pm Mangalore Correspondent ಕರಾವಳಿ
ಪುತ್ತೂರು, ಫೆ.19: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮೂಲದ ಯುವಕನೊಬ್ಬ ಐರ್ಲೆಂಡ್ ದೇಶದಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ನಡೆದಿದ್ದು ಸಾವಿನ ಬಗ್ಗೆ ಹಲವು ರೀತಿಯ ಅನುಮಾನ ಮೂಡಿದೆ. ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ವಾಸವಿದ್ದ ಸಾಂಜೋ ಸುನಿಲ್(31) ಎಂಬವರು ತನ್ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಬ್ಲಿನ್ ನಗರದ ಫಿಂಗ್ಲಾಸ್ ಎಂಬ ಪ್ರದೇಶದ ಚಾರ್ಲ್ಸ್ಟೌನ್ ಏರಿಯಾದಲ್ಲಿ ಇವರು ಪತ್ನಿಯೊಂದಿಗೆ ಮನೆ ಮಾಡಿಕೊಂಡಿದ್ದರು. ಸಾಂಜೋ ಸುನಿಲ್, ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಎಂಬಲ್ಲಿನ ನಿವಾಸಿಯಾಗಿದ್ದು ವರ್ಷದ ಹಿಂದೆ ಐರ್ಲೆಂಡಿನಲ್ಲಿ ನರ್ಸ್ ಆಗಿರುವ ಕಡಬದ ಯುವತಿಯನ್ನೇ ವಿವಾಹವಾಗಿದ್ದರು.
ಹಿಂದೆ ಇಸ್ರೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಸುನಿಲ್ ಅವರು ಕೆಲ ತಿಂಗಳ ಹಿಂದಷ್ಟೇ ಐರ್ಲೆಂಡಿಗೆ ತೆರಳಿದ್ದರು. ಪತ್ನಿ ಐರ್ಲೆಂಡ್ ನಲ್ಲಿ ನರ್ಸ್ ಆಗಿ ಕೆಲಸ ಆಗಿದ್ದರಿಂದ ಸುನಿಲ್ ಕೂಡ ತನ್ನ ಕೆಲಸವನ್ನು ಐರ್ಲೆಂಡಿಗೆ ಶಿಫ್ಟ್ ಮಾಡಿಸಿದ್ದರು. ಇದೀಗ ಐರ್ಲೆಂಡಿನ ತಮ್ಮ ಮನೆಯಲ್ಲೇ ಸುನಿಲ್ ಪತ್ನಿ ಇಲ್ಲದೇ ಇದ್ದಾಗ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಅನುಮಾನಗಳಿದ್ದು ಇದರ ಜೊತೆಗೆ ಇತರೇ ಸಾಧ್ಯತೆ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತ್ನಿ ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದ್ದಾಗಿ ಮಾಹಿತಿ ಲಭಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm