ಬ್ರೇಕಿಂಗ್ ನ್ಯೂಸ್
19-02-26 05:38 pm Mangalore ಕರಾವಳಿ
ಉಳ್ಳಾಲ, ಫೆ.19 ಮಂಗಳೂರಿನ ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ನಡೆದಿದ್ದು ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ತೀವ್ರ ಹಾನಿಯಾಗಿದೆ.
ಐದು ವರುಷಗಳ ಹಿಂದೆ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಹಲವರು ಆತ್ಮಹತ್ಯೆಗೈದಿದ್ದ ಘಟನೆ ನಡೆದಿತ್ತು. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಕಾಫೀ ಡೇ ಸಂಸ್ಥಾಪಕ ಸಿದ್ಧಾರ್ಥ ಇದೇ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆಗೈದ ಘಟನೆ ದೇಶದಾದ್ಯಂತ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನೇತ್ರಾವತಿ ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಮುಂದಾಗುವುದನ್ನು ತಡೆಯಲು ಮಂಗಳೂರು ನಗರಾಭಿವೃದ್ಧಿ ಇಲಾಖೆಯ 63 ಲಕ್ಷ ರೂಪಾಯಿ ಅನುದಾನದಿಂದ ನೇತ್ರಾವತಿ ಸೇತುವೆಯುದ್ದಕ್ಕೂ ಫೆನ್ಸಿಂಗ್ ಮತ್ತು ಸಿಸಿಟಿವಿಯನ್ನು ಅಳವಡಿಸಲಾಗಿತ್ತು.



ಇದರಿಂದಾಗಿ ಕಳೆದ ಐದು ವರುಷಗಳಲ್ಲಿ ಇಲ್ಲಿ ಆತ್ಮಹತ್ಯೆ ಸರಣಿ ಕಡಿಮೆಯಾಗಿತ್ತು. ಇಬ್ಬರು ಮಾತ್ರ ಸೇತುವೆ ಆವರಣ ಗೋಡೆಗೆ ಅಳವಡಿಸಿದ ಪೈಪ್ ಲೈನ್ ಮೂಲಕ ಪ್ರಯಾಸದಿಂದ ಹಾದು ಹೋಗಿ ನದಿಗೆ ಜಿಗಿದು ಆತ್ಮಹತ್ಯೆಗೈದಿದ್ದರು. ಅದು ಬಿಟ್ಟರೆ ಫೆನ್ಸಿಂಗ್ ಅಳವಡಿಕೆ ಯೋಜನೆ ಬಹುತೇಕ ಫಲಶ್ರುತಿ ಕಂಡಿತ್ತು. ಫೆನ್ಸಿಂಗ್ ಮತ್ತು ಸಿಸಿಟಿವಿ ಅಳವಡಿಸಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಅದರ ನಿರ್ವಹಣೆಯನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿತ್ತು.
ಇದೀಗ ಟೆಂಪೋ ಢಿಕ್ಕಿಯ ಪರಿಣಾಮ ಸೇತುವೆಯ ಫೆನ್ಸಿಂಗ್ ಅರೆಬರೆ ಕಿತ್ತುಹೋಗಿದ್ದು ಇದರ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮತ್ತೆ ಆತ್ಮಹತ್ಯೆಗೆ ಸೇತುವೆ ತೆರೆದುಕೊಂಡಿದೆಯೇ ಎನ್ನುವ ಮಾತುಗಳು ಜಾಲತಾಣದಲ್ಲಿ ಬರತೊಡಗಿವೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಹರಿದಿರುವ ಫೆನ್ಸಿಂಗ್ ಬೇಲಿಯನ್ನು ದುರಸ್ತಿ ಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Mini Tempo Crashes Into Netravati Bridge Wall, rs 60 Lakh Safety Fence Severely Damaged
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm