ಬ್ರೇಕಿಂಗ್ ನ್ಯೂಸ್
19-02-26 06:08 pm mangalore ಕರಾವಳಿ
ಮಂಗಳೂರು, ಫೆ.19 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ಧತೆಗಳು ಬಿರುಸುಗೊಳ್ಳುತ್ತಿರುವಂತೆಯೇ ಬಿ.ಸಿ.ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಹೋರಾಟದ ಕುರಿತಾಗಿ ಸಮಾಲೋಚನಾ ಸಭೆ ನಡೆಸಿದರು.
ಮಾಜಿ ಸಚಿವ ಬಿ ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳು, ಪಕ್ಷಗಳಿಗೆ ಸೇರಿದ ಪ್ರತಿನಿಧಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಮುಂದಿನ ಹೋರಾಟಗಳ ಕುರಿತು ಮಾರ್ಗದರ್ಶನ ಮಾಡಿದರು.


ಸಭೆಯ ಕೊನೆಯಲ್ಲಿ "ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ" ರಚಿಸಲು, ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳ್ಳುವವರೆಗೂ ಅವಿರತ ಹೋರಾಟ ನಡೆಸಲು ಸಭೆ ನಿರ್ಧರಿಸಿತು. ಹೋರಾಟ ಸಮಿತಿಗೆ ಬಿ ರಮಾನಾಥ ರೈ ಅವರನ್ನು ಗೌರವಾಧ್ಯಕ್ಷರಾಗಿ, ಬಿ ಶೇಖರ್ ಹಾಗು ಮೋಹನ್ ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಮುಂದಿನ ದಿನದಲ್ಲಿ ಸಮಾನ ಮನಸ್ಕರಾದ ಎಲ್ಲರನ್ನು ಒಳಗೊಂಡ ಸಮಾವೇಶ ನಡೆಸಿ ಪೂರ್ಣ ಪ್ರಮಾಣದ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
ಮಾರ್ಚ್ 3ರಂದು ಸಾಮೂಹಿಕ ಧರಣಿ
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನೂತನ ಸಮಿತಿ ವತಿಯಿಂದ, ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾರ್ಚ್ 3 ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ ಬೃಹತ್ ಸಾಮೂಹಿಕ ಧರಣಿ ನಡೆಸುವುದಾಗಿ ಸಭೆ ತೀರ್ಮಾನಿಸಿತು. ಮುಂದಿನ ಹಂತದಲ್ಲಿ ಮತ್ತಷ್ಟು ತೀವ್ರ ಹೋರಾಟ ಸಂಘಟಿಸುವುದು, ಟೋಲ್ ಗೇಟ್ ತೆರವುಗೊಳಿಸಿಯೇ ವಿಶ್ರಮಿಸುವುದು ಎಂದು ಸಭೆಯಲ್ಲಿ ನಿರ್ಧಾರಕ್ಕೆ ಬರಲಾಯಿತು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm