ಬ್ರೇಕಿಂಗ್ ನ್ಯೂಸ್
20-02-26 04:18 pm Mangalore Correspondent ಕರಾವಳಿ
ಉಳ್ಳಾಲ, ಫೆ.20: ಸರಕಾರಿ ಭೂಮಿಯ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪಟ್ಟಣ ವ್ಯಾಪ್ತಿಯ ಬಡ ವಸತಿ ರಹಿತರಿಗೆ ನಿವೇಶನ ಹಂಚುವಂತೆ ಬಿಜೆಪಿ ಅಧಿಕಾರದ ಆಡಳಿತವನ್ನೇ ನಿರಂತರವಾಗಿ ಪ್ರಶ್ನಿಸಿ ಕೊನೆಗೆ ಅದೇ ವಿಚಾರದಲ್ಲಿ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಧರಣಿಯನ್ನೂ ನಡೆಸಿದ್ದ ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯ ಸುಜಿತ್ ಮಾಡೂರು ಅವರನ್ನ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಫೆ.19ರಂದು ಈ ಆದೇಶ ಮಾಡಿದ್ದು ಸುಜಿತ್ ಮಾಡೂರು ಅವರು ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿರುವುದಾಗಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಆದೇಶದ ಪ್ರತಿಯನ್ನು ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಅವರಿಗೆ ಕಳುಹಿಸಲಾಗಿದ್ದು ಆ ಪ್ರತಿಯು ನಿನ್ನೆಯೇ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಂದು ಮಧ್ಯಾಹ್ನ ಸುಜಿತ್ ಮಾಡೂರು ಕೈ ಸೇರಿದೆ.



ಕಳೆದ ಆಗಸ್ಟ್ ತಿಂಗಳಲ್ಲಿ ಕೋಟೆಕಾರು ಪ.ಪಂ ನಲ್ಲಿ ಸತತ ಎರಡನೇ ಬಾರಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಪ್ರತೀ ತಿಂಗಳ ಸಾಮಾನ್ಯ ಸಭೆಯಲ್ಲಿ ಆಡಳಿತ ಬಿಜೆಪಿ ಪಕ್ಷದ ಕೌನ್ಸಿಲರ್ ಸುಜಿತ್ ಮಾಡೂರು ಅವರು ಕಳೆದ 15 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬಡ ನಿವೇಶನ ರಹಿತರ ಅರ್ಜಿಗಳ ವಿಲೇವಾರಿ ಮಾಡದಿರುವ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಧ್ವನಿ ಎತ್ತುತ್ತಲೇ ಬಂದಿದ್ದರು.
ಕಳೆದ ಜನವರಿ 29 ರಂದು ನಡೆದಿದ್ದ ಸಾಮಾನ್ಯ ಸಭೆಯಲ್ಲಿ ಸುಜಿತ್ ಮಾಡೂರು ಅವರು ನಿವೇಶನ ರಹಿತರ ಅರ್ಜಿಗಳ ವಿಲೇವಾರಿ ಮಾಡದಿರುವ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತ ಪಡಿಸಿದ್ದಲ್ಲದೆ, ವಿಪಕ್ಷದವರ ಜತೆ ಸಾಮಾನ್ಯ ಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಹಾಗೂ ಗ್ರಾಮ ಕರಣಿಕರಿಗೆ ಧಿಕ್ಕಾರ ಕೂಗಿದ್ದರು.
ಕೋಟೆಕಾರು ಪಟ್ಟಣ ವ್ಯಾಪ್ತಿಯಲ್ಲಿ ಸಾಕಷ್ಟು ಸರಕಾರಿ ಭೂಮಿಯಿದ್ದರೂ ಅಧಿಕಾರಿಗಳು ವಸತಿ ರಹಿತ ಬಡವರಿಗೆ ನಿವೇಶನ ಹಂಚುವ ಕಾರ್ಯ ನಡೆಸಿಲ್ಲ. ಆದರೆ ನಡುಕುಮೇರು ಎಂಬಲ್ಲಿ ಪಟ್ಟಣ ಪಂಚಾಯತ್ಗೆ ಸೇರಿರುವ ಸರಕಾರಿ ಜಾಗದಲ್ಲಿ ಭೂ ಮಾಫಿಯಗಳು ಕಟ್ಟಿರುವ ನಿವೇಶನಗಳನ್ನ ನೆಲಸಮ ಮಾಡುವಂತೆ ಪ.ಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡರೂ ಸಹ ಯಾವುದೇ ತಾರ್ಕಿಕ ಕ್ರಮ ಕೈಗೊಳ್ಳದ ಪಂಚಾಯತ್ ಆಡಳಿತ ವಿರುದ್ಧ ಸುಜಿತ್ ಅವರು ಸಾಮಾನ್ಯ ಸಭೆಗಳಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅಕ್ರಮ ಕಟ್ಟಡಗಳನ್ನ ತೆರವುಗೊಳಿಸುವ ವಿಚಾರದಲ್ಲಿ ಕುಂಟು ನೆಪ ಹೇಳಿ ಜವಬ್ದಾರಿಯಿಂದ ನುಣುಚಿಕೊಳ್ಳುವ ಅಧಿಕಾರಿಗಳನ್ನೂ ಸಹ ಸುಜಿತ್ ಅವರು ನಿರಂತರವಾಗಿ ಜಾಡಿಸುತ್ತಿದ್ದರು.
ಬಡವರಿಗೆ ನಿವೇಶನ ನೀಡಲು ಹೋರಾಟ ನಡೆಸುತ್ತಿರುವ ಕೌನ್ಸಿಲರನ್ನು ಪಕ್ಷದಿಂದ ಉಚ್ಚಾಟನೆ ನಡೆಸಿರುವ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm