ಬ್ರೇಕಿಂಗ್ ನ್ಯೂಸ್
20-02-26 06:05 pm Mangalore Correspondent ಕರಾವಳಿ
ಮಂಗಳೂರು, ಫೆ.20: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಎಸಿ ಕುರಿಯನ್ ಎಂಬವರ ಅಡಿಕೆ ತೋಟದಲ್ಲಿ ಮೇಲ್ವಿಚಾರಕನಾಗಿದ್ದ ಶ್ರೀಧರ ಮುಗೇರ ಕೊಲೆ ಪ್ರಕರಣದಲ್ಲಿ ಮರು ತನಿಖೆಗಾಗಿ ಹೈಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಐಜಿಪಿ ಲಾಬೂರಾಮ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಮಾಡಿದೆ.
2022ರ ಡಿಸೆಂಬರ್ 18ರಂದು ಶ್ರೀಧರ್ ಮುಗೇರ ಅವರ ಶವ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸಿದ ಧರ್ಮಸ್ಥಳ ಠಾಣೆ ಪೊಲೀಸರು 2023ರ ಜನವರಿಯಲ್ಲಿ ತಿಮ್ಮಪ್ಪ ಪೂಜಾರಿ, ಆನಂದ ಗೌಡ, ಲಕ್ಷ್ಮಣ ಪೂಜಾರಿ ಮತ್ತು ಮಹೇಶ್ ಪೂಜಾರಿ ಆರೋಪಿಗಳೆಂದು ಬಂಧಿಸಿದ್ದರು. ಆನಂತರ, ಪ್ರಕರಣದ ತನಿಖೆಯನ್ನು ಸಾಮಾಜಿಕ ಕಾರ್ಯಕರ್ತರ ಒತ್ತಡದ ಮೇರೆಗೆ ಸಿಐಡಿಗೆ ವರ್ಗಾಯಿಸಲಾಗಿತ್ತು.

ಶ್ರೀಧರ ಮುಗೇರ ಶವ ಹಲ್ಲೆಗೀಡಾಗಿ ಬೆತ್ತಲೆಯಾಗಿ ಬಿದ್ದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರೋಪಿಗಳು ಇವರನ್ನು ಕೊಲೆಗೈದು ಶವವನ್ನು 300 ಮೀಟರ್ ದೂರದಲ್ಲಿ ಬಿಸಾಕಿದ್ದಾಗಿ ಆರೋಪಗಳಿದ್ದವು. ಆದರೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸಾಕ್ಷ್ಯಾಧಾರಗಳಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದು ಕುಟುಂಬಸ್ಥರನ್ನು ಕೆರಳಿಸಿತ್ತು. ಹೀಗಾಗಿ ಮರು ತನಿಖೆಗಾಗಿ ವಿಶೇಷ ತನಿಖಾ ತಂಡ ನೇಮಿಸಬೇಕೆಂದು ಹೈಕೋರ್ಟಿಗೆ ಕುಟುಂಬ ಮನವಿ ಮಾಡಿತ್ತು. ಇದಲ್ಲದೆ, ಕೊಲೆಯಾದ ಬಗ್ಗೆ ಬಲವಾದ ಅನುಮಾನಗಳನ್ನು ವ್ಯಕ್ತಪಡಿಸಿತ್ತು. ಇದರಂತೆ, ಹೈಕೋರ್ಟ್ ಎಸ್ಐಟಿ ರಚಿಸುವಂತೆ 2025ರ ಸೆಪ್ಟಂಬರ್ ನಲ್ಲಿ ರಾಜ್ಯ ಸರಕಾರಕ್ಕೆ ಸೂಚನೆ ನೀಡಿತ್ತು.
ಹೈಕೋರ್ಟ್ ಸೂಚನೆಯಂತೆ ಇದೀ ರಾಜ್ಯ ಡಿಜಿಪಿ ಡಾ.ಎಂ.ಎ. ಸಲೀಂ ಅವರು ಐಜಿಪಿ ಲಾಬೂರಾಮ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಇದರಲ್ಲಿ ಹಾಲಿ ಉಡುಪಿ ಎಸ್ಪಿ ಆಗಿರುವ ಹರಿರಾಮ್ ಶಂಕರ್ ಮತ್ತು ಬೆಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿಯಾಗಿರುವ ಎಂ.ಆರ್ ಹರೀಶ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm