ಬ್ರೇಕಿಂಗ್ ನ್ಯೂಸ್
21-02-26 09:02 pm Mangaluru Staffer ಕರಾವಳಿ
ಉಳ್ಳಾಲ, ಫೆ.21: ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡಾ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗಳೊಬ್ಬಳು ಆಟದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ. ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಇಂದು ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳಂತೆ.


ಈ ವೇಳೆ ತನುಷ್ಕಾ ಲೂಡೊ ಆಟದಲ್ಲಿ ಬಳಸಲಾಗುವ ಹೊಸ ಶಂಕು ಆಕಾರದ ಕಾಯ್ನ್ ಅನ್ನು ನುಂಗಿ ಏಕಾಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಬರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಒಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.
ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕಾಯ್ನ್ ಲಭಿಸಿದೆ. ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಹೈಸ್ಕೂಲ್ ನಲ್ಲಿ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಆಕೆಯ ದಿಢೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸೇರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm