ಬ್ರೇಕಿಂಗ್ ನ್ಯೂಸ್
21-02-26 09:02 pm Mangaluru Staffer ಕರಾವಳಿ
ಉಳ್ಳಾಲ, ಫೆ.21: ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡಾ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗಳೊಬ್ಬಳು ಆಟದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ. ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಇಂದು ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳಂತೆ.


ಈ ವೇಳೆ ತನುಷ್ಕಾ ಲೂಡೊ ಆಟದಲ್ಲಿ ಬಳಸಲಾಗುವ ಹೊಸ ಶಂಕು ಆಕಾರದ ಕಾಯ್ನ್ ಅನ್ನು ನುಂಗಿ ಏಕಾಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಬರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಒಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.
ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕಾಯ್ನ್ ಲಭಿಸಿದೆ. ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಹೈಸ್ಕೂಲ್ ನಲ್ಲಿ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಆಕೆಯ ದಿಢೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸೇರಿದ್ದರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am