ಬ್ರೇಕಿಂಗ್ ನ್ಯೂಸ್
21-02-26 09:02 pm Mangaluru Staffer ಕರಾವಳಿ
ಉಳ್ಳಾಲ, ಫೆ.21: ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡಾ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗಳೊಬ್ಬಳು ಆಟದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ. ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಇಂದು ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳಂತೆ.


ಈ ವೇಳೆ ತನುಷ್ಕಾ ಲೂಡೊ ಆಟದಲ್ಲಿ ಬಳಸಲಾಗುವ ಹೊಸ ಶಂಕು ಆಕಾರದ ಕಾಯ್ನ್ ಅನ್ನು ನುಂಗಿ ಏಕಾಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಬರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಒಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.
ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕಾಯ್ನ್ ಲಭಿಸಿದೆ. ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಹೈಸ್ಕೂಲ್ ನಲ್ಲಿ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಆಕೆಯ ದಿಢೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸೇರಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm