ಬ್ರೇಕಿಂಗ್ ನ್ಯೂಸ್
01-01-21 10:00 pm Mangaluru Correspondent ಕರಾವಳಿ
ಮಂಗಳೂರು, ಜ.1: ನಮ್ಮ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. ಈ ಬಗ್ಗೆ ಯಾವುದೇ ರೀತಿಯ ನಿಷ್ಪಕ್ಷಪಾತ ತನಿಖೆ ನಡೆಸಲಿ. ಪ್ರಕರಣದಲ್ಲಿ ಬಂಧಿತ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ಮೂರು ದಿನಗಳ ಬಳಿಕ ಎಸ್ಪಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲಾಗುವುದು ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ತಿಳಿಸಿದ್ದಾರೆ.
ತಿರುಚಿದ ವೀಡಿಯೋ ಒಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಇದೆ ಎಂದು ಆರೋಪಿಸಿ ಎಸ್ಡಿಪಿಐ ಪಕ್ಷದ ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರ ಹಿಂದೆ ಎಸ್ಡಿಪಿಐ ಬೆಳವಣಿಗೆಯನ್ನು ಸಹಿಸದೆ ಇರುವವರ ಷಡ್ಯಂತ್ರ ಇದೆ. ಈ ಹಿಂದೆ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ರೀತಿಯ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಿರುಚಿದ ವೀಡಿಯೋ ಪೊಲೀಸರಿಗೆ, ಮಾಧ್ಯಮಗಳಿಗೆ ಎಲ್ಲಿಂದ ಬಂದಿದೆ ಎನ್ನುವ ಸತ್ಯ ವಿಚಾರ ಬಹಿರಂಗವಾಗಬೇಕು. ಈ ಹಿಂದೆ ಸಂಘ ಪರಿವಾರದ ಮುಖಂಡರೊಬ್ಬರು ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. ಇದೇ ಸಂಘಟನೆಯ ವತಿಯಿಂದ ಈ ರೀತಿಯ ಷಡ್ಯಂತ್ರ ನಡೆಯುತ್ತಿದೆ ಎಂದು ಅಶ್ರಫ್ ಮಾಚಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಘಟಕದ ಅಧ್ಯಕ್ಷ ಹೈದರ್ ನಿರ್ಸಾಲ್ ಮೊದಲಾದವರು ಉಪಸ್ಥಿತರಿದ್ದರು.
The SDPI has warned of Gherao of Sp's office in Mangalore in regards to Pro-Pakistan Slogan at Ujre, Belthangady, Mangalore for arresting the innocents of SDPI members.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm