ಬ್ರೇಕಿಂಗ್ ನ್ಯೂಸ್
01-01-21 10:00 pm Mangaluru Correspondent ಕರಾವಳಿ
ಮಂಗಳೂರು, ಜ.1: ನಮ್ಮ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. ಈ ಬಗ್ಗೆ ಯಾವುದೇ ರೀತಿಯ ನಿಷ್ಪಕ್ಷಪಾತ ತನಿಖೆ ನಡೆಸಲಿ. ಪ್ರಕರಣದಲ್ಲಿ ಬಂಧಿತ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ಮೂರು ದಿನಗಳ ಬಳಿಕ ಎಸ್ಪಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲಾಗುವುದು ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ತಿಳಿಸಿದ್ದಾರೆ.
ತಿರುಚಿದ ವೀಡಿಯೋ ಒಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಇದೆ ಎಂದು ಆರೋಪಿಸಿ ಎಸ್ಡಿಪಿಐ ಪಕ್ಷದ ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರ ಹಿಂದೆ ಎಸ್ಡಿಪಿಐ ಬೆಳವಣಿಗೆಯನ್ನು ಸಹಿಸದೆ ಇರುವವರ ಷಡ್ಯಂತ್ರ ಇದೆ. ಈ ಹಿಂದೆ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ರೀತಿಯ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಿರುಚಿದ ವೀಡಿಯೋ ಪೊಲೀಸರಿಗೆ, ಮಾಧ್ಯಮಗಳಿಗೆ ಎಲ್ಲಿಂದ ಬಂದಿದೆ ಎನ್ನುವ ಸತ್ಯ ವಿಚಾರ ಬಹಿರಂಗವಾಗಬೇಕು. ಈ ಹಿಂದೆ ಸಂಘ ಪರಿವಾರದ ಮುಖಂಡರೊಬ್ಬರು ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. ಇದೇ ಸಂಘಟನೆಯ ವತಿಯಿಂದ ಈ ರೀತಿಯ ಷಡ್ಯಂತ್ರ ನಡೆಯುತ್ತಿದೆ ಎಂದು ಅಶ್ರಫ್ ಮಾಚಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಘಟಕದ ಅಧ್ಯಕ್ಷ ಹೈದರ್ ನಿರ್ಸಾಲ್ ಮೊದಲಾದವರು ಉಪಸ್ಥಿತರಿದ್ದರು.
The SDPI has warned of Gherao of Sp's office in Mangalore in regards to Pro-Pakistan Slogan at Ujre, Belthangady, Mangalore for arresting the innocents of SDPI members.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm