ಬ್ರೇಕಿಂಗ್ ನ್ಯೂಸ್
01-01-21 10:00 pm Mangaluru Correspondent ಕರಾವಳಿ
ಮಂಗಳೂರು, ಜ.1: ನಮ್ಮ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. ಈ ಬಗ್ಗೆ ಯಾವುದೇ ರೀತಿಯ ನಿಷ್ಪಕ್ಷಪಾತ ತನಿಖೆ ನಡೆಸಲಿ. ಪ್ರಕರಣದಲ್ಲಿ ಬಂಧಿತ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ಮೂರು ದಿನಗಳ ಬಳಿಕ ಎಸ್ಪಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲಾಗುವುದು ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ತಿಳಿಸಿದ್ದಾರೆ.
ತಿರುಚಿದ ವೀಡಿಯೋ ಒಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಇದೆ ಎಂದು ಆರೋಪಿಸಿ ಎಸ್ಡಿಪಿಐ ಪಕ್ಷದ ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರ ಹಿಂದೆ ಎಸ್ಡಿಪಿಐ ಬೆಳವಣಿಗೆಯನ್ನು ಸಹಿಸದೆ ಇರುವವರ ಷಡ್ಯಂತ್ರ ಇದೆ. ಈ ಹಿಂದೆ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ರೀತಿಯ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಿರುಚಿದ ವೀಡಿಯೋ ಪೊಲೀಸರಿಗೆ, ಮಾಧ್ಯಮಗಳಿಗೆ ಎಲ್ಲಿಂದ ಬಂದಿದೆ ಎನ್ನುವ ಸತ್ಯ ವಿಚಾರ ಬಹಿರಂಗವಾಗಬೇಕು. ಈ ಹಿಂದೆ ಸಂಘ ಪರಿವಾರದ ಮುಖಂಡರೊಬ್ಬರು ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. ಇದೇ ಸಂಘಟನೆಯ ವತಿಯಿಂದ ಈ ರೀತಿಯ ಷಡ್ಯಂತ್ರ ನಡೆಯುತ್ತಿದೆ ಎಂದು ಅಶ್ರಫ್ ಮಾಚಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಘಟಕದ ಅಧ್ಯಕ್ಷ ಹೈದರ್ ನಿರ್ಸಾಲ್ ಮೊದಲಾದವರು ಉಪಸ್ಥಿತರಿದ್ದರು.
The SDPI has warned of Gherao of Sp's office in Mangalore in regards to Pro-Pakistan Slogan at Ujre, Belthangady, Mangalore for arresting the innocents of SDPI members.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm