ಬ್ರೇಕಿಂಗ್ ನ್ಯೂಸ್
24-02-26 10:39 pm HK News Staffer ಕರಾವಳಿ
ಮಂಗಳೂರು, ಫೆ.24: ನಗರದಲ್ಲಿ ಆನ್ಲೈನ್ ಹೂಡಿಕೆ ಆಮಿಷಕ್ಕೆ ಒಳಗಾದ 37 ವರ್ಷದ ಮಹಿಳೆಯೊಬ್ಬರು ಎರಡು ವರ್ಷಗಳಲ್ಲಿ ಹಂತ ಹಂತವಾಗಿ ₹19.06 ಲಕ್ಷ ಕಳೆದುಕೊಂಡಿರುವ ಗಂಭೀರ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯ ಮೊಬೈಲ್ಗೆ ಹೂಡಿಕೆ ಅವಕಾಶಗಳ ಜಾಹೀರಾತು ಸಂದೇಶಗಳು ಬಂದಿದ್ದು, ಹೆಚ್ಚಿನ ಲಾಭದ ಭರವಸೆ ನೀಡಲಾಗಿತ್ತು. ಅದನ್ನು ನಂಬಿದ ಮಹಿಳೆ ಸಂಬಂಧಿತ ವೆಬ್ಸೈಟ್ ಹುಡುಕಿದ್ದು, ಅಲ್ಲಿಂದ APK ಫೈಲ್ ಡೌನ್ಲೋಡ್ ಮಾಡಿದ್ದಾರೆ. ಬಳಿಕ, ತನ್ನ ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ನೋಂದಣಿ ಮಾಡಿಕೊಂಡು ಹೂಡಿಕೆ ಪ್ರಕ್ರಿಯೆ ಆರಂಭಿಸಿದ್ದಾರೆ. ಅಪ್ಲಿಕೇಶನ್ನಲ್ಲಿ ವಿವಿಧ ಕಂಪನಿಗಳ ವಿವರಗಳು ಹಾಗೂ ಹೆಚ್ಚಿನ ಲಾಭದ ಭರವಸೆ ತೋರಿಸಲಾಗುತ್ತಿದ್ದು, ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಲಾಗಿತ್ತು.
ಅಪ್ಲಿಕೇಶನ್ನಲ್ಲಿ ಕನಿಷ್ಠ ₹1 ಲಕ್ಷ ಹೂಡಿಕೆ ಕಡ್ಡಾಯವೆಂದು ತಿಳಿಸಲಾಗಿದ್ದು, ಗರಿಷ್ಠ ಮಿತಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಈ ಷರತ್ತಿನಡಿ ಮಹಿಳೆ ಜನವರಿ 2024ರಿಂದ ಹಂತ ಹಂತವಾಗಿ ಒಟ್ಟು ₹19.06 ಲಕ್ಷ ಹೂಡಿಕೆ ಮಾಡಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಗರಿಷ್ಠ ₹1 ಲಕ್ಷದ ವರೆಗೆ ಲಾಭ ಬಂದಿದ್ದು, ಇದರಿಂದ ಹೂಡಿಕೆ ನೈಜವೆಂಬ ಭ್ರಮೆ ಮೂಡಿತ್ತು. ಇದರಿಂದ ಮಹಿಳೆ ಮತ್ತಷ್ಟು ಹಣ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಆದರೆ ನಂತರ ತಮ್ಮ ಬ್ಯಾಂಕ್ ಖಾತೆ ಬ್ಲಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ಬ್ಯಾಂಕ್ ಸಂಪರ್ಕಿಸಿದಾಗ ಸೈಬರ್ ವಂಚನೆಗೆ ಒಳಗಾಗಿರುವುದು ತಿಳಿದು, ಮಂಗಳೂರು ಸಿಇಎನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ವೆಬ್ಸೈಟ್ಗಳಿಂದ APK ಫೈಲ್ ಡೌನ್ಲೋಡ್ ಮಾಡುವುದು, ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವುದು ಹಾಗೂ ಅಧಿಕ ಲಾಭದ ಭರವಸೆಗೆ ಒಳಗಾಗುವುದು ಗಂಭೀರ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯವಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm